20/07/2023
ಅನ್ನ, ಅಕ್ಷರ, ಆಶ್ರಯ ದಾಸೋಹಕ್ಕೆ ಹೆಸರುವಾಸಿಯಾಗಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಗೆ ಜನ್ಮದಿನದಂದು ನನ್ನ ಗೌರವಪೂರ್ಣ ಶುಭಾಶಯಗಳು.
Sri Sri Sri Dr.Nirmalanandanatha Maha Swamiji
15/07/2023
ತಮ್ಮಲ್ಲಿರುವ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಂಡು ವೃತ್ತಿ ಜೀವನದಲ್ಲಿ ಹೆಚ್ಚಿನ ಯಶಸ್ಸು ಗಳಿಸಬೇಕಾದ ಜವಾಬ್ದಾರಿ ಯುವಜನತೆಯ ಮೇಲಿದೆ. ವಿಶ್ವ ಯುವ ಕೌಶಲ್ಯ ದಿನವಾದ ಇಂದು ಈ ಕುರಿತು ಚಿಂತನೆ ನಡೆಸೋಣ.
04/07/2023
ಶ್ರೇಷ್ಠ ಸಂತ, ವಿಶ್ವ ವಿಜೇತ ಶ್ರೀ ಸ್ವಾಮಿ ವಿವೇಕಾನಂದರಿಗೆ ಪುಣ್ಯತಿಥಿಯಂದು ನನ್ನ ಗೌರವಪೂರ್ಣ ಪ್ರಣಾಮಗಳು. ಯುವ ಸಮಾಜದ ಮನೋಬಲ ಹೆಚ್ಚಿಸುವಂತಹ ಇವರ ಪ್ರಬುದ್ಧ ಚಿಂತನೆಗಳನ್ನು ನಾವಿಂದು ಸ್ಮರಿಸೋಣ.
03/07/2023
ಗುರು ಪೂರ್ಣಿಮೆಯ ಹಾರ್ದಿಕ ಶುಭಾಶಯಗಳು. ನಮ್ಮ ತಪ್ಪುಗಳನ್ನೆಲ್ಲ ತಿದ್ದಿ, ಜೀವನವನ್ನು ಸರಿಯಾದ ದಾರಿಯಲ್ಲಿ ಕೊಂಡೊಯ್ಯಲು ಮಾರ್ಗದರ್ಶನ ಮಾಡಿದ ಸಮಸ್ತ ಗುರುಗಳಿಗೆ ನನ್ನ ಗೌರವಪೂರ್ಣ ನಮನಗಳು.
01/07/2023
ತಮ್ಮ ಕರ್ತವ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸಿ, ಜನರ ಆರೋಗ್ಯ ಹಾಗೂ ಜೀವವನ್ನು ಕಾಪಾಡುವ ವೈದ್ಯರುಗಳು ದೇವರಿಗೆ ಸಮಾನ. ರಾಷ್ಟ್ರೀಯ ವೈದ್ಯರ ದಿನವಾದ ಇಂದು ಅವರೆಲ್ಲರಿಗೂ ನನ್ನ ಗೌರವಪೂರ್ಣ ನಮನಗಳು.
30/06/2023
ವಿಜ್ಞಾನ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿ 'ಭಾರತರತ್ನ' ಗೌರವಕ್ಕೆ ಪಾತ್ರರಾಗಿರುವ ಶ್ರೀ ಸಿ.ಎನ್.ಆರ್.ರಾವ್ರವರಿಗೆ ಜನ್ಮದಿನದ ಶುಭಾಶಯಗಳು. ವಿಜ್ಞಾನದಲ್ಲಿ ಆಸಕ್ತಿಯಿರುವ ಯುವಪೀಳಿಗೆಗೆ ಇವರು ಸ್ಫೂರ್ತಿಯ ಚಿಲುಮೆಯಾಗಿದ್ದಾರೆ. ಭಗವಂತನು ಇವರಿಗೆ ಉತ್ತಮ ಆರೋಗ್ಯ, ಆಯುಷ್ಯ, ನೆಮ್ಮದಿಯನ್ನು ಕರುಣಿಸಲಿ ಎಂದು ಹಾರೈಸುತ್ತೇನೆ.
29/06/2023
ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರಿದ್ ಹಬ್ಬದ ಹಾರ್ದಿಕ ಶುಭಾಶಯಗಳು. ತ್ಯಾಗ ಮತ್ತು ಬಲಿದಾನದ ಪ್ರತೀಕವಾಗಿರುವ ಈದ್-ಅಲ್-ಅಧಾ ಹಬ್ಬವು ಸಮಾಜದಲ್ಲಿ ಸೌಹಾರ್ದತೆ ಬೆಸೆಯಲಿ ಹಾಗೂ ಎಲ್ಲರ ಬದುಕಿನಲ್ಲಿ ಸಂತೋಷ, ನೆಮ್ಮದಿ, ಸಮೃದ್ಧಿ ತರಲಿ ಎಂಬ ಹಾರೈಕೆಗಳು.
27/06/2023
ಸಮಸ್ತ ಜನತೆಗೆ ಶ್ರೀ ನಾಡಪ್ರಭು ಕೆಂಪೇಗೌಡ ಜಯಂತಿಯ ಹಾರ್ದಿಕ ಶುಭಾಶಯಗಳು. ಅತ್ಯಂತ ವ್ಯವಸ್ಥಿತವಾಗಿ ಬೆಂಗಳೂರು ನಗರವನ್ನು ನಿರ್ಮಿಸಿದ ಇವರ ದಕ್ಷ ಆಡಳಿತ, ದಿಟ್ಟ ನಿರ್ಧಾರ ಹಾಗೂ ದೂರದೃಷ್ಟಿಯ ಚಿಂತನೆಗಳು ನಮಗೆಲ್ಲರಿಗೂ ಮಾದರಿಯಾಗಿವೆ.
Statue of Prosperity - ಪ್ರಗತಿಯ ಪ್ರತಿಮೆ
23/06/2023
ಅಂತಾರಾಷ್ಟ್ರೀಯ ಒಲಂಪಿಕ್ ದಿನದ ಶುಭಾಶಯಗಳು. ಒಲಂಪಿಕ್ ಕ್ರೀಡಾಕೂಟಗಳಲ್ಲಿ ಸಾಧನೆ ತೋರಿದ ಪ್ರತಿಯೊಬ್ಬರಿಗೂ ಗೌರವ ಸಲ್ಲಿಸುತ್ತಾ, ಭಾರತವು ಇನ್ನಷ್ಟು ಸಾಧನೆ ಮಾಡಬೇಕೆಂಬ ಆಶಯದೊಂದಿಗೆ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವವರನ್ನು ಪ್ರೋತ್ಸಾಹಿಸೋಣ.
21/06/2023
ಸಮಸ್ತ ಜನತೆಗೆ ಅಂತಾರಾಷ್ಟ್ರೀಯ ಯೋಗ ದಿನದ ಶುಭ ಹಾರೈಕೆಗಳು. ಪ್ರತಿದಿನವೂ ಶ್ರದ್ಧೆ ಹಾಗೂ ಬದ್ಧತೆಯಿಂದ ಯೋಗಾಸನಗಳನ್ನು ಮಾಡಿ ನಮ್ಮ ದೇಹ ಹಾಗೂ ಮನಸ್ಸನ್ನು ಇನ್ನಷ್ಟು ಸದೃಢಗೊಳಿಸಿಕೊಳ್ಳೋಣ.
18/06/2023
ಮಕ್ಕಳಿಗೆ ಸುಂದರ ಬದುಕು ಕಟ್ಟಿಕೊಡಲು ಜೀವನದ ಬಹುಕಾಲವನ್ನು ಬಳಸುವ ತಂದೆಯ ಶ್ರಮವು ಅತ್ಯಂತ ಶ್ರೇಷ್ಠವಾಗಿದೆ. ವಿಶ್ವ ಅಪ್ಪಂದಿರ ದಿನವಾದ ಇಂದು ಎಲ್ಲರ ತಂದೆಯರಿಗೆ ಗೌರವಯುತ ನಮನಗಳು.
06/06/2023
ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆ ನೀಡಿರುವ ಜ್ಞಾನಪೀಠ ಪುರಸ್ಕೃತ ಸಾಹಿತಿ ಶ್ರೀ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ರವರಿಗೆ ಜನ್ಮದಿನ ಹಾಗೂ ಪುಣ್ಯತಿಥಿಯಂದು ನನ್ನ ಪ್ರಣಾಮಗಳು. 'ಮಾಸ್ತಿ ಕನ್ನಡದ ಆಸ್ತಿ' ಎಂದು ಕರೆಯಲ್ಪಡುವ ಇವರು ಸಮಸ್ತ ಸಾಹಿತ್ಯಪ್ರಿಯರ ಅಂತರಾಳದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ.