13/04/2024
Remembering Dr.Bhimrao Ramji Ambedkar Sir on his Birth Anniversary.
Tiger of Mysore Hazrath Tippu Sulthan(R.A) Youth Welfare Organization (Kowdenahalli)
like our page at :- www.facebook.com/tippusulthanyouthorganization
Email:- [email protected]
13/04/2024
Remembering Dr.Bhimrao Ramji Ambedkar Sir on his Birth Anniversary.
16/02/2024
10/11/2023
ಕನ್ನಡ ರಾಜ್ಯೋತ್ಸವ, ಮೈಸೂರು ಹುಲಿ ಟಿಪ್ಪು ಸುಲ್ತಾನ್ ಹಾಗೂ ಮೌಲಾನ ಅಬುಲ್ ಕಲಾಂ ಆಝಾದ್ ಅವರ ಜಯಂತ್ಯೋತ್ಸವ ಆಚರಣೆ
09/11/2023
ಆತ್ಮೀಯ ಆಹ್ವಾನ
ಅಸ್ಸಲಾಮು ಅಲೈಕುಂ ವ ರಹ್ಮತುಲ್ಲಾಹಿ ವ ಬರಕಾತುಹು
"ಮೈಸೂರು ಹುಲಿ" ಹಝ್ರತ್ ಟಿಪ್ಪು ಸುಲ್ತಾನ್ (ರ.ಅ) ಯುವಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನವೆಂಬರ್ 10 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕೌದೇನಹಳ್ಳಿ ಗ್ರಾಮದಲ್ಲಿ
ಕನ್ನಡ ರಾಜ್ಯೋತ್ಸವ, ಹಝ್ರತ್ ಟಿಪ್ಪು ಸುಲ್ತಾನ್ (ರ.ಅ) ಹಾಗೂ ಮೌಲಾನ ಅಬುಲ್ ಕಲಾಂ ಆಝಾದ್ ರವರ ಜಯಂತ್ಯೋತ್ಸವದ ಪ್ರಯುಕ್ತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ತಾವೆಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸುತ್ತಿದ್ದೇವೆ.
ಇಂತಿ
ಅಧ್ಯಕ್ಷರು ಹಾಗೂ ಪದಾಧಿಕಾರಿಗಳು
"ಮೈಸೂರು ಹುಲಿ" ಹಝ್ರತ್ ಟಿಪ್ಪು ಸುಲ್ತಾನ್ (ರ.ಅ) ಯುವಕರ ಕ್ಷೇಮಾಭಿವೃದ್ಧಿ ಸಂಘ, ಕೌದೇನಹಳ್ಳಿ
26/10/2023
15/08/2023
77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರು ಪೂರ್ವ ತಾಲ್ಲೂಕಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕೆ.ಆರ್.ಪುರದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಸನ್ಮಾನ ಸ್ವೀಕಾರ
ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಬೆಂಗಳೂರು ನಗರ ಜಿಲ್ಲೆ, ಜೂನ್ 23 (ಕರ್ನಾಟಕ ವಾರ್ತೆ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ನಗರ ಜಿಲ್ಲೆ (ಕೇಂದ್ರೀಯ ವಿಭಾಗ) ವತಿಯಿಂದ 2023-24ನೇ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ (OVERSEAS) ವಿದೇಶಿ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮತ್ತು ಮಾನ್ಯತೆ ಪಡೆದಿರುವ ಯಾವುದೇ ವಿದೇಶಿ ವಿಶ್ವವಿದ್ಯಾಲಯದಿಂದ, ಭಾರತ ದೇಶದ ಪ್ರತಿಷ್ಟಿತ ಐ.ಐ.ಟಿ.ಎಸ್ (IIT’S), ಐ.ಐ.ಎಂ.ಎಸ್ (IIM’S), ಐ.ಎಸ್.ಸಿ (ISC) ಸಂಸ್ಥೆಗಳಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮಾಡ ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ (OVERSEAS EDUCATION) ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು http://kmdconline.karnataka.gov.in/ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟ್ ಔಟ್ ಪಡೆದು ಕ್ಯೂ.ಆರ್ ಕೋಡ್ ಹೊಂದಿರುವ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪಿ.ಯು.ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ 05, ಎಸ್.ಎಸ್.ಎಲ್.ಸಿ ವರ್ಗಾವಣಾ ಪತ್ರ, ಪ್ರಸ್ತುತ ಅಧ್ಯಯನದ ಪ್ರಮಾಣ ಪತ್ರ, ಕಾಲೇಜು ಶುಲ್ಕ ರಚನೆ, ಪಾಸ್ ಪೋರ್ಟ್ ನಕಲು, ವೀಸಾ ನಕಲು, ಫಲಾನುಭವಿಯ ಪ್ರಮಾಣ ಪತ್ರ, ಫಲಾನುಭವಿ & ಜಾಮೀನುದಾರರ ಜಂಟಿ ಪ್ರಮಾಣ ಪತ್ರ, ಪ್ರಾಮೀಸರಿ ನೋಟ್ ಜೋತೆಗೆ ಡಿ.ಪಿ. ನೋಟ್ ಡಿಲಿವರಿ ಲೇಟರ್, ಮಾರಾಟ ಪತ್ರಗಳು ಮತ್ತು ತಾಯಿಯ ಪತ್ರ, ಖಾತಾಸಾರ ಮತ್ತು ಖಾತಾ ಪ್ರಮಾಣಪತ್ರ ಅಥವಾ ರೂಪಾಂತರ, ನಮೂನೆ ನಂ.15ರಲ್ಲಿ ನಿಲ್ ಎನ್ಕಂಬರೆನ್ಸ್ ಪ್ರಮಾಣಪತ್ರ, ನವೀಕೃತ ತೆರೆಗೆ ಪಾವತಿಸಿದ ರಶೀದಿ, ಸೂಕ್ತ ಪ್ರಾಧಿಕರದಿಂದ ಮಾರ್ಗದರ್ಶನ ದರ, ಜಿಲ್ಲಾ ವ್ಯವಸ್ಥಾಪಕರಿಂದ ಆಸ್ತಿಯ ಸ್ಥಳ ಪರಿಶೀಲನೆ ವರದಿ ಹಾಗೂ ನೋಂದಯಿತ ಮೌಲ್ಯಮಾಪಕರಿಂದ ಮೌಲ್ಯಮಾಪನ ವರದಿ, ಈ ಎಲ್ಲಾ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಬೆಂಗಳೂರು ನಗರ ಜಿಲ್ಲೆ (ಕೇಂದ್ರೀಯ ವಿಭಾಗ) ಕೊಠಡಿ ಸಂಖ್ಯೆ ಎಫ್.ಎಫ್ -29/37, 1ನೇ ಮಹಡಿ, ಹಮೀದ್ ಷಾ ಕಾಂಪ್ಲೆಕ್ಸ್, ಹಲಸೂರು ಗೇಟ್ ಪೊಲೀಸ್ ಠಾಣೆ ಹತ್ತಿರ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು-560002 ಇಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ: ದೂರವಾಣಿ ಸಂಖ್ಯೆ 080-22114815 ಅಥವಾ ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಬೆಂಗಳೂರು ನಗರ ಜಿಲ್ಲೆ ಕೇಂದ್ರೀಯ ವಿಭಾಗದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
02/06/2023
ಸಮಾಜ ಸೇವಕನ ನೆರವಿಗೆ ಧಾವಿಸುವಂತೆ ಕಳಕಳಿಯ ಮನವಿ.