15/02/2026
ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಭೂತಿ ಅಲಂಕಾರದಲ್ಲಿ ಪರಮಪೂಜ್ಯ ಗುರುದೇವರ ಗದ್ದುಗೆ🙏💐 ಸಿದ್ದಗಂಗಾ ಮಠದ
ತಪ್ಪದೇ ಈ ಪೇಜ್ ಅನ್ನು fallow ಮತ್ತು Like ಮಾಡಿ
15/02/2026
ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಭೂತಿ ಅಲಂಕಾರದಲ್ಲಿ ಪರಮಪೂಜ್ಯ ಗುರುದೇವರ ಗದ್ದುಗೆ🙏💐 ಸಿದ್ದಗಂಗಾ ಮಠದ
ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಸ್ಥಾನ.ತೇರಿನ ಬೀದಿ.ದೊಡ್ಡಬಳ್ಳಾಪುರ. ದಿನಾಂಕ :3- 2.-2026.ರಂದು. ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿಯ ಬ್ರಹ್ಮ ರಥೋತ್ಸವ. ಬಹಳ ವಿಜೃಂಭಣೆಯಿಂದ ನಡೆಯಿತು. ಈ ಬ್ರಹ್ಮೋತ್ಸವದಲ್ಲಿ ಸಾವಿರಾರು ಜನ ಅಕ್ಕಪಕ್ಕದ ಹಳ್ಳಿಗಳಿಂದ ದೊಡ್ಡಬಳ್ಳಾಪುರ ನಗರದಿಂದ. ಸಾವಿರಾರು ಜನ ಬಂದು ಸೇರಿ ತೇರಿಗೆ ದವನ ಬಾಳೆಹಣ್ಣು. ಎಸೆಯುವುದರ ಮೂಲಕ ಸಂತಸದಿಂದ ದೇವರ ದರ್ಶನ ಪಡೆದು ಪುನೀತರಾದರು. ಅಲ್ಲಲ್ಲಿ ಪಾನಕ ಹೆಸರುಬೇಳೆ ಪ್ರಸಾದ ವಿತರಣೆ ನಡೆಯಿತು. ದೇವಸ್ಥಾನದಲ್ಲಿ ಬಂದ ಭಕ್ತಾದಿಗಳಿಗೆ ಪುಳಿಯೋಗರೆ ಲಾಡು ಹಂಚಲಾಯಿತು. ಮತ್ತು ದೇವಸ್ಥಾನದಲ್ಲಿ ಬೆಳಗ್ಗೆಯಿಂದ ದೇವರ ಹಾಡುಗಳು ಸಂಘ ಸಂಸ್ಥೆಗಳಿಂದ ಏರ್ಪಡಿಸಲಾಗಿತ್ತು. ದೇವರಿಗೆ ವಿವಿಧ ಪುಷ್ಪಗಳಿಂದ ವಿಜೃಂಭಣೆಯಿಂದ. ಅಲಂಕರಿಸಲಾಗಿತ್ತು.
ಶ್ರೀ ಘಾಟಿಸುಭ್ರಹ್ಮಣ್ಯ ಸ್ವಾಮಿ ಈ ದಿನದ ವಿಶೇಷ ಅಲಂಕಾರ
ಅವರೆಕಾಯಿ ಸುಳಿಯೋಕು ಮಷೀನ್ ಬಂತಲ್ಲಪ್ಪ ಮುಂದೇನು ಬರುತ್ತೆ ದೇವರೆಬಲ್ಲ
ಸ್ವಾಮಿ ಶರಣಂ… 🙏
ಹಗಲಿನಲ್ಲಿ ಲಕ್ಷಾಂತರ ಭಕ್ತರ ಜಪ, ತಪ, ಶರಣಘೋಷಗಳಿಂದ
ಪ್ರತಿಧ್ವನಿಸುವ ಶಬರಿಮಲೆ ಶ್ರೀ ಅಯ್ಯಪ್ಪ ದೇವಾಲಯ,
ರಾತ್ರಿ ಮೌನಕ್ಕೆ ಲೀನವಾಗುವಾಗ
ಅಲ್ಲಿ ಒಂದು ಅತ್ಯಂತ ಗಂಭೀರ, ರಹಸ್ಯಮಯ ಮತ್ತು
ಲೋಕಕಲ್ಯಾಣಾರ್ಥ ನಡೆಯುವ ಪೂಜೆ ಆರಂಭವಾಗುತ್ತದೆ—
ಅದೇ ಗುರುತಿ ಪೂಜೆ.
ಇದು ಭಕ್ತರ ಕಣ್ಣುಗಳಿಗೆ ಕಾಣದ ಪೂಜೆ…
ಆದರೆ ಭಕ್ತರ ರಕ್ಷಣೆಗೆ ನಡೆಯುವ ಪೂಜೆ.
ಯಾತ್ರಾ ಕಾಲದಲ್ಲಿ ಉಂಟಾದ
ಅಶುದ್ಧತೆ, ಅಶಾಂತಿ, ಋಣಾತ್ಮಕ ಶಕ್ತಿಗಳು
ಪವಿತ್ರ ಸನ್ನಿಧಾನದ ಗಡಿಯನ್ನೇ ದಾಟದಂತೆ
ಮೌನದಲ್ಲೇ ತಡೆಹಿಡಿಯುವ ದೈವಿಕ ಕ್ರಮ.
ಗುರುತಿ ಪೂಜೆಯಲ್ಲಿ
ದುಷ್ಟ ಶಕ್ತಿಗಳಿಗೆ ಆಹಾರ ಸಮರ್ಪಿಸಿ,
ಅವುಗಳನ್ನು ತೃಪ್ತಿಪಡಿಸಿ,
“ಇದು ಅಯ್ಯಪ್ಪನ ಕ್ಷೇತ್ರ—
ಇಲ್ಲಿ ಅಶಾಂತಿಗೆ ಜಾಗವಿಲ್ಲ”
ಎಂಬ ದೈವಿಕ ಗಡಿ ರೇಖೆಯನ್ನು
ಸ್ಪಷ್ಟವಾಗಿ ಎಳೆಯಲಾಗುತ್ತದೆ.
ಇದು ಭಯ ಹುಟ್ಟಿಸುವ ಪೂಜೆ ಅಲ್ಲ…
ಇದು ರಕ್ಷಣೆ ನೀಡುವ ಪೂಜೆ.
ಇದು ಕತ್ತಲೆಯನ್ನು ಒಪ್ಪಿಕೊಳ್ಳುವುದಲ್ಲ…
ಕತ್ತಲೆಯನ್ನು ತನ್ನ ಗಡಿಯೊಳಗೆ ನಿಲ್ಲಿಸಿ
ಬೆಳಕನ್ನು ಕಾಪಾಡುವ ಮಹಾ ತಪಸ್ಸು.
ಮಣಿಕಂಠನ ಸನ್ನಿಧಾನವು
ಸದಾ ಶುದ್ಧ, ಶಾಂತ, ಸುರಕ್ಷಿತವಾಗಿರಲೆಂದು,
ಮುಂದಿನ ಯಾತ್ರೆಗೆ ದಾರಿ ಸಿದ್ಧವಾಗಲೆಂದು,
ಮೌನದಲ್ಲೇ ನಡೆಯುವ ಈ ಪೂಜೆ
ಭಕ್ತರಿಗೆ ಕಾಣದಿದ್ದರೂ
ಭಕ್ತರ ಬದುಕಿಗೆ ಕವಚವಾಗಿ ನಿಂತಿರುತ್ತದೆ.
ಅದಕ್ಕೇ…
ಶಬರಿಮಲೆಯ ಪಾವಿತ್ರ್ಯ ಕೇವಲ ದೀಪಗಳಲ್ಲಿ ಅಲ್ಲ,
ಕಾಣದ ಈ ತಪಸ್ಸುಗಳಲ್ಲಿಯೂ ಇದೆ. 🕉️✨
ಸ್ವಾಮಿ ಶರಣಂ…
ಸ್ವಾಮಿಯೇ ಶರಣಂ ಅಯ್ಯಪ್ಪ… 🙏
15/01/2026
ಭೋಗಿ ಹಬ್ಬ / ಸಂಕ್ರಾಂತಿ ಹಬ್ಬ
🙏 ಸಂಕ್ರಾಂತಿ ದಿನ ಸಂಜೆ ಮಕ್ಕಳನ್ನು ಕೂಡಿಸಿ ಆರತಿ ಮಾಡಿ ಬೋರೇ ಹಣ್ಣು (ಎಳಚಿ ಹಣ್ಣು), ಕಬ್ಬಿನ ಚೂರು, ನಾಣ್ಯಗಳನ್ನು ಹಾಕುತ್ತಾರೆ. ಏಕೆಂದರೆ –
🙏 ಮೊರದ ಬಾಗಿನದಲ್ಲಿ ಇಡತಕ್ಕಂತಹ ವಸ್ತುಗಳು
🙏 ಮರದ ಬಾಗಿನ ಕೊಡುವವರು ಹೇಳತಕ್ಕದ್ದು
🙏 ಮರದ ಬಾಗಿನ ಪಡೆಯುವವರು ಹೇಳತಕ್ಕದ್ದು
🙏 ಉತ್ತರಾಯಣ ಪುಣ್ಯಕಾಲ ತರ್ಪಣ ಸಂಕಲ್ಪ
🙏 ಸಂಕ್ರಾಂತಿ ಎಂದರೆ ಏನು ... ಮಾಹಿತಿ - 2
🙏 ಸಂಕ್ರಾಂತಿ ದಿನ ಸೂರ್ಯ ನಮಸ್ಕಾರ ಮಾಡಿ
🙏 ಧಾರ್ಮಿಕ ನಂಬಿಕೆ ಸೂರ್ಯ ನಮಸ್ಕಾರ
🙏 ಸಂಕ್ರಾಂತಿ ಹಬ್ಬದ ದಿನ ಪಾಠನೇ ಮಾಡಿ
🎙️ಸಂಕ್ರಾಂತಿ ಹಬ್ಬದ ವಿಶೇಷಗಳನ್ನು ಓದುಗರಿಗಾಗಿ ಸಂಗ್ರಹಿಸಿ ತಿಳಿಸಿದೇವೆ ... ವೇದಾಂತ ಜ್ಞಾನ ಯವರಿಂದ ಸಂಕ್ರಾಂತಿ ಹಬ್ಬದ ಶುಭಾಶಯಗಳು 🙏
🎙️ ಭೋಗಿ ಹಬ್ಬ –
ಭೋಗಿ ಹಬ್ಬವು ಸಂಕ್ರಾಂತಿ ಆಚರಣೆಯ ಮೊದಲ ಹಬ್ಬವಾಗಿದೆ. ಈದಿನ ದೇವೇಂದ್ರನನ್ನು ಪೂಜಿಸುವುದು ವಾಡಿಕೆ ಏಕೆಂದರೆ ದೇವೇಂದ್ರನು ಮಳೆಯ ದೇವತೆ. ಭೂಮಿಗೆ ಸುಭಿಕ್ಷ ಬರಲಿ ಎಂದು ಕೇಳುತ್ತಾ ಈ ಹಬ್ಬವನ್ನು ಆಚರಿಸುತ್ತಾರೆ. ಈದಿನ ನಮ್ಮ ಮನೆಯನ್ನು ಸ್ವಚ್ಛಗೊಳಿಸಿ, ತಳಿರುತೋರಣದಿಂದ ಅಲಂಕಾರ ಮಾಡುತ್ತಾರೆ. ಮನೆಯ ಮುಂದೆ ಸೆಗಣಿಯಿಂದ ಸಾರಿಸುತ್ತಾರೆ. ಈದಿನ ಸಿಹಿಗುಂಬಳ ಕಾಯಿಯ ಪಲ್ಯ, ರೊಟ್ಟಿ ಮಾಡುತ್ತಾರೆ.
🎙️ ಸಂಕ್ರಾಂತಿ ದಿನ ಸಂಜೆ ಮಕ್ಕಳನ್ನು ಕೂಡಿಸಿ ಆರತಿ ಮಾಡಿ ಬೋರೇ ಹಣ್ಣು (ಎಳಚಿ ಹಣ್ಣು), ಕಬ್ಬಿನ ಚೂರು, ನಾಣ್ಯಗಳನ್ನು ಹಾಕುತ್ತಾರೆ. ಏಕೆಂದರೆ –
ಮಕರ ಸಂಕ್ರಾಂತಿಯ ಸಂಜೆ ಐದು ವರ್ಷದ ಒಳಗಿನ ಮಕ್ಕಳನ್ನು ಕೂಡಿಸಿ, ಆರತಿ ಮಾಡಿ ಅವರಿಗೆ ಬೋರೇ ಹಣ್ಣು (ಎಲಚು ಹಣ್ಣು) ಕಬ್ಬಿನ ಜಲ್ಲೆಯ ಚೂರು ಮತ್ತು ನಾಣ್ಯಗಳನ್ನು ಕೂಡಿಸಿ ಅವರ ತಲೆಯ ಮೇಲೆ ಎರೆಯುವುದು ಮಾಡುತ್ತೇವೆ. ಏಕೆ ? ಇದಕ್ಕೂ ವೈಜ್ಞಾನಿಕ ಕಾರಣವಿದೆ. ಆಯುರ್ವೇದ ರೀತ್ಯ ನೆಗಡಿ, ಕೆಮ್ಮು, ಮೂಲವ್ಯಾಧಿ, ಸುಟ್ಟಗಾಯ, ಬೆವರುವುದು, ಬಿಕ್ಕಳಿಕೆ ಮೊದಲಾದ್ದಕ್ಕೆ ಎಲಚಿಹಣ್ಣಿ ನಿಂದ ಮಾಡಿದ ಔಷಧಿಗಳು ಬಹಳ ಪರಿಣಾಮಕಾರಿ. ಇಷ್ಟೇ ಅಲ್ಲ, ಅವು ಮಕ್ಕಳಲ್ಲಿನ ತುಂಟತನ, ಹಠಮಾರಿತನ ಹೋಗಲಾಡಿಸಲೂ ಸಹಕಾರಿ. ಎಲಹೆ ಹಣ್ಣಿನ ಕಷಾಯವನ್ನು ಇಂತಹ ಮಕ್ಕಳಿಗೆ ಕೊಡುವ ವಾಡಿಕೆ ಯಿದೆ. ಆದ್ದರಿಂದ ಅದರ ಸ್ಪರ್ಷದಿಂದ ಕೂಡ ಅದರ ಗುಣ ಬರುತ್ತದೆ.
ಸುಮ್ಮನೆ ತಲೆಯ ಮೇಲೆ ಈ ಹಣ್ಣು ಬಿದ್ದರೆ ತುಂಟತನ ಹೇಗೆ ಹೋಗುತ್ತೆ? ಮನುಷ್ಯನ ದೇಹವೂ ಕೂಡ ಒಂದು ವಿದ್ಯುತ್ ಕೇಂದ್ರ. ಸದಾ ವಿದ್ಯುತ್ಛಕ್ತಿ ಉತ್ಪಾದನೆ ಮತ್ತು ವಿಸರ್ಜನೆಯಾಗುತ್ತಿರುತ್ತದೆ. ಈ ಉತ್ಪಾನೆಯ ಮುಖ್ಯ ಕೇಂದ್ರ ಬ್ರಹ್ಮಾಂಡವೂ (ನೆತ್ತಿ) ಒಂದು. ಎಲಚಿ ಹಣ್ಣನ್ನು ತಲೆಯ ಮೇಲೆ ಹಾಕಿದಾಗ ಇದರ ಸ್ಪರ್ಶ ಮಾತ್ರದಿಂದ ದೇಹದಲ್ಲಿರುವ ವಿದ್ಯುತ್ ಈ ಗುಣವನ್ನು ಸ್ವಲ್ಪ ಆಕರ್ಷಿಸುತ್ತದೆ. ಇದಕ್ಕೆ ಎಲೆಕ್ಟ್ರೋ ಮಾಗ್ನೆಟಿಸಂ ಎನ್ನುತ್ತಾರೆ. ಹೀಗೆ ಆಕರ್ಷಿಸಲ್ಪಟ್ಟ ಎಲಚಿ ಹಣ್ಣಿನ ಗುಣವು ನೆತ್ತಿಯಲ್ಲಿರುವ ಸಂಬಂಧಿಸಿದ ನರಗಳ ಮೇಲೆ ಪ್ರಭಾವ ಬೀರಿ ಈ ಹಠಮಾರಿತನಕ್ಕೆ ಸಂಬಂಧಿಸಿದ ನರಗಳು ಸುಧಾರಿಸುತ್ತವೆ. ತುಂಟತನ ಕಡಿಮೆಯಾಗುತ್ತದೆ. ಎಳಚಿಹಣ್ಣಿನಲ್ಲಿ ಅನುದ್ವೇಗಪಡಿಸುವ ಗುಣ ಇದೆ ಎಂದಾಯಿತು. ಇದು ಮುಂಜಾಗರೂಕತೆ ದೃಷ್ಟಿಯಿಂದ ಹಿಂದಿನವರು ಮಾಡಿದ್ದು ನಮಗೆ ಸಂಪ್ರದಾಯವಾಗಿ ಕಂಡುಬಂದರೂ ವೈಜ್ಞಾನಿಕವೂ ಹೌದು.
ಬೋರೇ ಹಣ್ಣಿನ ಜೊತೆ ಕಬ್ಬಿನ ಚೂರು ಮತ್ತು ನಾಣ್ಯಗಳನ್ನೂ ಹಾಕುತ್ತಾರೆ. ಮಕ್ಕಳಿಗೆ ಸಿಹಿ ಅಂದರೆ ಇಷ್ಟ. ಕಬ್ಬಿನ ಹಣ್ಣಿನ ಚೂರು ಗಳನ್ನು ತಿನ್ನಲು ಆಸಕ್ತರಾಗು ಹಸೆಮಣೆ ಮೇಲೆ ಕೂಡುತ್ತಾರೆ. ಅಲ್ಲದೆ ಕಬ್ಬಿನ ರಸ ಪಿತ್ತಹರ. ಉತ್ತರಾಯಣ ಕಾಲದಲ್ಲಿ ಉಷ್ಣವು ಜಾಸ್ತಿ ಯಾಗುವುದರ ಮೂಲಕ ಪಿತ್ತ ಸಂಬಂಧಿ ದೋಷಗಳು ಬಾರದಿರಲಿ ಎಂದು ಕಬ್ಬಿನ ಉಪಯೋಗ ಮಾಡಿದ್ದಾರೆ.
ಮಕರ ಸಂಕ್ರಮಣವು ಪುಷ್ಯ ಮಾಸದಲ್ಲೇ ಸಾಮಾನ್ಯವಾಗಿ ಬರುತ್ತದೆ. ಶನಿಯ ನಕ್ಷತ್ರ ಪುಷ್ಯ. ಪುಷ್ಯಕ್ಕೆ ಬೃಹಸ್ಪತಿ ಅಧಿದೇವತೆ. ಶನಿಗೆ ಯಮ ಅಧಿದೇವತೆ. ಯಮ ಅಂದರೆ ಸಂಯಮ ಎಂದೂ ಅರ್ಥ. ಶನಿ ಜೀವ ನಾಡಿಗೆ ಕಾರಕ. ಉತ್ತರಾಯಣದಲ್ಲಿ ರವಿಯು ಮಕರ ರಾಶಿಗೆ ಪ್ರವೇಶಿಸುತ್ತಿದ್ದ ಹಾಗೆ ಹವಾ ಬದಲಾವಣೆಯಾಗಲು ಆರಂಭವಾಗುತ್ತದೆ. ಇದು ಎಳೆ ಮಕ್ಕಳ ಮೇಲೆ ಪ್ರಭಾವಕಾರಿ. ಮಕ್ಕಳ ಮೇಲೆ ಹೃದಯ ಬಡಿತ ಮತ್ತು ರಕ್ತ ಚಲನೆಯನ್ನು ಜೀವನಾಡಿಯು ಚುರುಕುಗೊಳಿಸುತ್ತದೆ. ಇದನ್ನು ಹತೋಟಿಯಲ್ಲಿಡಲೂ ಎಲಚಿ ಹಣ್ಣು ಸಹಾಯಕಾರಿ.
🎙️ ಮೊರದ ಬಾಗಿನದಲ್ಲಿ ಇಡತಕ್ಕಂತಹ ವಸ್ತುಗಳು
ಅಕ್ಕಿ, ಬೇಳೆಗಳು, ಎಳ್ಳು, ಉಪ್ಪು, ಹುಣಿಸೇ ಹಣ್ಣು, ದೇವರ ದೀಪಕ್ಕೆ ಉಪಯೋಗಿಸುವ ಬತ್ತಿಗಳು, ಬೆಲ್ಲ, ಧನಿಯ, ಜೀರಿಗೆ, ಲವಂಗ, ಮೆಣಸು, ಇಂಗು, ಎಣ್ಣೆ, ತುಪ್ಪ, ಕೊಬ್ಬರಿ, ಅರಿಶಿಣ, ಕುಂಕುಮ, ಅನಿಷಿದ್ಧ ಹಣ್ಣುಗಳು, ತರಕಾರಿ, ಹಾಲು, ಮೊಸರು, ಬಾಚಣಿಕೆ, ಬಿಚ್ಚೋಲೆ, ಕರಿಮಣಿ, ಕುಪ್ಪಸದ ಕಣ, ಕನ್ನಡಿ, ಬಳೆ, ಕಾಡಿಗೆ, ವಿಳ್ಳೇದೆಲೆ, ಅಡಕೆ, ದಕ್ಷಿಣೆ.
ಇದೆಲ್ಲವನ್ನೂ ಸಿದ್ಧಪಡಿಸಿ, ದೀಪವನ್ನು ಹಚ್ಚಿ, ದೇವರ ಮುಂದಿಟ್ಟು, ದೇವರಿಗೆ ಸಮರ್ಪಿಸಿ, ಆಹ್ವಾನಿತ ಮುತ್ತೈದೆಯ ಪಾದ ಪೂಜೆ ಮಾಡಿ, ಪೂರ್ವಾಭಿಮುಖವಾಗಿ ಮಣೆ ಅಥವಾ ಚಾಪೆಯ ಮೇಎ ಕೂಡಿಸಿ, (ಬರೀ ನೆಲದ ಮೇಲ ಕೂಡಿಸಬೇಡಿ), ಕುಂಕುಮ ಕೊಟ್ಟು, ಅರಿಶಿನ ಕೊಟ್ಟು, ತಲೆ ಬಾಚಿ, ಹೂವು ಮುಡಿಸಿ, ಕಣ್ಣಿಗೆ ಕಾಡಿಗೆ ಹಚ್ಚಿ, ಕನ್ನಡಿಯಿಂದ ಅವರ ಮುಖವನ್ನು ತೋರಿಸಿ, ವಿಳ್ಳೇದೆಲೆ ಆದಕೆ ದಕ್ಷಿಣೆ ಕೊಟ್ಟು, ಕೊಡುವವರ ಸೆರಗು ಮತ್ತು ಪಡೆದುಕೊಳ್ಳುವವರ ಸೆರಗು ಮೊರದ ಬಾಗಿನದ ಮೇಲೆ ಹರಡಿ ಮೂರು ಬಾರಿ ತೂಗಿ, ದಾನ ಕೊಟ್ಟು, ನಂತರ ಮೊರದ ಬಾಗಿನದ ಮೇಲಿನ ಮೊರವನ್ನು ತೆಗೆದು ಮುತ್ತೈದೆಗೆ ತೋರಿಸಬೇಕು. ನಂತರ ಮುತ್ತೈಗೆ ನಮಸ್ಕರಿಸಿ ಆಶೀರ್ವಾದ ಪಡೆಯಬೇಕು
🎙️ ಮರದ ಬಾಗಿನ ಕೊಡುವವರು ಹೇಳತಕ್ಕದ್ದು
ರಾಮಪತ್ನೀ ಮಹಾಭಾಗೇ ಪುಣ್ಯಮೂರ್ತೇ ನಿರಾಮಯೇ |
ಮಯಾದತ್ತಾನಿ ಶೂರ್ಪಾಣಿ ತ್ವಯಾ ಸ್ವೀಕೃತಾ ಜಾನಕೀ |🙏
🎙️ ಮರದ ಬಾಗಿನ ಪಡೆಯುವವರು ಹೇಳತಕ್ಕದ್ದು
ರಾಮಪತ್ನೀ ಮಹಾಭಾಗೇ ಪುಣ್ಯಮೂರ್ತೇ ನಿರಾಮಯೇ |
ತ್ವಯಾ ದತ್ತಾನಿ ಶೂರ್ಪಾಣಿ ಮಯಾ ಸ್ವೀಕೃತಾ ಜಾನಕೀ |🙏
🎙️ ಉತ್ತರಾಯಣ ಪುಣ್ಯಕಾಲ ತರ್ಪಣ ಸಂಕಲ್ಪ
೧. ಆಚಮನ
೨. ಪವಿತ್ರ ಧಾರಣ (ಪವಿತ್ರ ಮಾಡಲು ಬರದಿದ್ದರೆ ಪವಿತ್ರದ ಉಂಗುರವಿದ್ದರೂ ಪರವಾಗಿಲ್ಲ)
೩. ಪುನರಾಚಮನ
೪. ಪ್ರಾಣಾಯಾಮ
ನಂತರ ಸಂಕಲ್ಪ —
ಶ್ರೀ ಗೋವಿಂದ ಗೋವಿಂದ ವಿಷ್ಣೋರಾಜ್ಞಯಾ ಪ್ರವರ್ತಮಾನಸ್ಯ, ಆದ್ಯ ಬ್ರಹ್ಮಣ:, ದ್ವಿತೀಯ ಪರಾರ್ಧೇ, ಶ್ರೀ ಶ್ವೇತವರಾಹಕಲ್ಪೇ, ವೈವಸ್ವತ ಮನ್ವಂತರೇ, ಕಲಿಯುಗೇ, ಪ್ರಥಮಪಾದೇ, ಜಂಭೋದ್ವೀಪೇ, ದಂಡಕಾರಣ್ಯೇ, ಗೋದಾವರ್ಯಾ: ದಕ್ಷಿಣೇತೀರೇ ಶಾಲೀವಾಹನ ಶಕೇ, ಬೌದ್ಧಾವತಾರೇ, ರಾಮಕ್ಷೇತ್ರೇ (ಪರಶುರಾಮಕ್ಷೇತ್ರೇ), ಶ್ರೀ ಪರಮವೈಷ್ಣವ ಸನ್ನಿಧೌ, ಅಸ್ಮಿನ್ ವರ್ತಮಾನೇ ಚಾಂದ್ರಮಾನೇನ ________________ ನಾಮ ಸಂವತ್ಸರೇ, ಉತ್ತರಾಯಣೇ, _____ಋತೌ, _____ಮಾಸೇ, ____ ನಕ್ಷತ್ರೇ, ____ಯೋಗೇ ______ ಕರಣೇ, _____ವಾಸರಯುಕ್ತಾಯಂ, ಪಿತ್ರಾದಿ ಸಮಸ್ತ ಪಿತ್ರೂಣಾಂ ಅಂತರ್ಗತ, ಮನುನಾಮಕ, ಶ್ರೀ ಭಾರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀಮನ್ಮಧ್ವವಲ್ಲಭ ಜನಾರ್ಧನ ವಾಸುದೇವ ಪ್ರೇರಣಯಾ, ಶ್ರೀಮನ್ಮಧ್ವವಲ್ಲಭ ಜನಾರ್ಧನ ವಾಸುದೇವ ಪ್ರೀತ್ಯರ್ಥಂ, ವಿಷ್ಣು ನಕ್ಷತ್ರ, ವಿಷ್ಣುಯೋಗ, ವಿಷ್ಣು ಕರಣ, ಏವಂ ಗುಣ ವಿಶೇಷಣ ವಿಶಿಷ್ಟಾಯಾಂ ಪುಣ್ಯತಿಥೌ., (ಪ್ರಾಚೀನಾವೀತಿ), (ಜನಿವಾರವನ್ನು ಎಡಕ್ಕೆ ಹಾಕಿಕೊಂಡು) ಸದ್ಯ: ತಿಲತರ್ಪಣಂ ಕರಿಷ್ಯೇ –
೧. ಪಿತ್ರು, ಪಿತಾಮಹ, ಪ್ರಪಿತಾಮಹ
೨. ಮಾತ್ರು, ಪಿತಾಮಹಿ, ಪ್ರಪಿತಾಮಹಿ
೩.ಮಾತಾಮಹ, ಮಾತು: ಪಿತಾಮಹ, ಮಾತು: ಪ್ರಪಿತಾಮಹ
೪. ಮಾತಾಮಹಿ, ಮಾತು: ಪಿತಾಮಹಿ, ಮಾತು: ಪ್ರಪಿತಾಮಹಿ
ಈ ಮೇಲ್ಕಂಡ 12 ಜನಕ್ಕೂ ಅಲ್ಲದೆ ಸರ್ವಪಿತೃಗಳಿಗೂ ತರ್ಪಣ ಕೊಡಬಹುದು. (ಅಕಸ್ಮಾತ್ ಇವರುಗಳಲ್ಲಿ ಯಾರಾದರೂ ಬದುಕಿದ್ದರೆ ಅವರನ್ನು ಬಿಟ್ಟು).
ಅವತ್ತು ಏಕಭುಕ್ತನಾಗಿರಬೇಕು.
ಬೆಳಿಗ್ಯೆ ಎಂದಿನಂತೆ ಮುಂಜಾನೆಯೇ ಎದ್ದು, ಸ್ನಾನ, ಆಹ್ನೀಕಾದಿಗಳನ್ನು ಮಾಡಿ, ನಿರ್ಮಾಲ್ಯ ವಿಸರ್ಜಿಸಿ, ಉಪವಾಸವಿದ್ದು,
ಉತ್ತರಾಯಣ ಪುಣ್ಯಕಾಲ ಸಮಯದವರೆಗೂ ಉಪವಾಸವಿದ್ದು, ಪರ್ವಕಾಲ ಬಂದ ಮೇಲೆ ಸ್ನಾನಾದಿಗಳನ್ನು ಮಾಡಿ ನಂತರ ಸೂರ್ಯಾಸ್ತದೊಳಗೆ ತರ್ಪಣಕೊಟ್ಟರೆ ಶ್ರೇಷ್ಠ.
🎙️ಸಂಕ್ರಾಂತಿ ದಿನ ಸೂರ್ಯ ನಮಸ್ಕಾರ ಮಾಡಿ
ಹಿಂದೂಗಳು ಸೂರ್ಯ ಭಗವಾನ್ಗೆ ನಮಸ್ಕಾರವನ್ನು ಸಲ್ಲಿಸುವ ವಾಡಿಕೆ ಅನಾದಿಕಾಲದಿಂದಲು ನಡೆದು ಬಂದಿದೆ. ಬೆಳಗ್ಗೆ ಸೂರ್ಯೋದಯವಾಗುವಾಗ ಸೂರ್ಯನಿಗೆ ನೀರನ್ನು ಅರ್ಪಿಸುತ್ತ ಇದನ್ನು ಮಾಡುತ್ತಾರೆ. ಏಕೆಂದರೆ ಬೆಳಗಿನ ಸೂರ್ಯ ಕಿರಣಗಳನ್ನು ನೀರಿನ ಮೂಲಕ ನೋಡುವುದು ಕಣ್ಣುಗಳಿಗೆ ಒಳ್ಳೆಯದು. ಜೊತೆಗೆ ಈ ಅನುಷ್ಟಾನವನ್ನು ಮಾಡಲು ನಾವು ಸೂರ್ಯೋದಯಕ್ಕಿಂತ ಮೊದಲೇ ಏಳಬೇಕಾಗುತ್ತದೆ. ಇದರಿಂದಾಗಿ ನಾವು ಬೆಳಗ್ಗೆ ಬೇಗ ಏಳುವ ಅಭ್ಯಾಸವನ್ನು ಇರಿಸಿಕೊಳ್ಳುತ್ತೇವೆ. ಹೀಗಾಗಿ ಮುಂಜಾನೆಯ ಒಳ್ಳೆಯ ಮತ್ತು ನಿರ್ಮಲವಾದ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ.
🎙️ ಧಾರ್ಮಿಕ ನಂಬಿಕೆ ಸೂರ್ಯ ನಮಸ್ಕಾರ
ಸೂರ್ಯ ನಮಸ್ಕಾರದಿಂದ ಪುಣ್ಯ ಪ್ರಾಪ್ತಿಯಾಗುತ್ತದೆ,ಗೋ ದಾನದ ಫಲವೂ ಇದೆ ಎಂದು ಹೇಳಿ ಇದಕ್ಕೆ ಧಾರ್ಮಿಕ ನಂಬಿಕೆಯನ್ನು ನೀಡಿ ಇದನ್ನು ನಿತ್ಯವೂ ಮಾಡುವಂತೆ ಪ್ರೇರೇಪಿಸುತ್ತಿದ್ದರು.ಹಾಗಾಗಿ ಸೂರ್ಯನಿಗೆ ಅರ್ಘ್ಯ ಕೊಡುವುದು ಮತ್ತು ಮಂತ್ರ ಸ್ತೋತ್ರ ಗಳೊಂದಿಗೆ ಆತನನ್ನು ಸ್ತುತಿಸುವುದು ಧಾರ್ಮಿಕ ಆಚರಣೆಯ ಅಂಗವಾಗಿ ಬೆಳೆದು ಬಂದಿದೆ.ಧಾರ್ಮಿಕ ಆಚರಣೆಗಳೆಲ್ಲವನ್ನು ಬದಿಗಿಟ್ಟು ನೋಡಿದರೂ ಸೂರ್ಯ ನಮ್ಮ ಆರೋಗ್ಯವನ್ನು ವ್ರದ್ದಿಸುವ ಜೀವಸತ್ವಗಳ ಗಣಿ.
ದೇಹಕ್ಕೆ ಅವಶ್ಯಕವಾದ "ಡಿ"ಜೀವಸತ್ವವನ್ನು ಉತ್ಪಾದಿಸುವ ಏಕೈಕ ಮೂಲ ಸೂರ್ಯ."ಡಿ"ಜೀವಸತ್ವದ ಕೊರತೆಯುಂಟಾದಾಗ ಹೃದ್ರೋಗ, ಕ್ಷಯ, ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳು ಬಾಧಿಸುವ ಸಾಧ್ಯತೆಗಳಿವೆ. ಮುಂಜಾನೆಯ ಸೂರ್ಯಕಿರಣಗಳೊಂದಿಗೆ ಮಾಡುವ ಸೂರ್ಯ ನಮಸ್ಕಾರವು ದೇಹದ ರಕ್ತ ಸಂಚಾರವನ್ನು ಸುಲಲಿತಗೊಳಿಸಿ ರಕ್ತದೊತ್ತಡ ಹಾಗೂ ಕೊಬ್ಬನ್ನು ನಿಯಂತ್ರಿಸುತ್ತದೆ.
ಇದಕ್ಕೂ ಮಿಗಿಲಾಗಿ ತನು ಮನಕ್ಕೆ ಚೈತನ್ಯ ತುಂಬುವ ಉಚಿತ ಔಷಧಿ ಎಂದರೆ ಸೂರ್ಯನ ಬೆಳಕು. ಕತ್ತಲಲ್ಲಿ ಇರುವ ಗಿಡ, ಮರ, ಬಳ್ಳಿಗಳು ಕೂಡಾ ಸೂರ್ಯನ ಬೆಳಕಿಗೆ ಕತ್ತು ಚಾಚುತ್ತವೆ. ಬೆಳಕಿನೆಡೆಗೆ ಬಾಗುತ್ತವೆ.ಸೂರ್ಯನ ಬೆಳಕಿನ ಕೊರತೆ ಮನುಷ್ಯನ ಖಿನ್ನತೆಗೆ ಕಾರಣ ವಾಗುವುದಲ್ಲದೆ ಜೀವನದಲ್ಲಿ ಬೇಸರ ಜಿಗುಪ್ಸೆ ಹುಟ್ಟಿಸಬಲ್ಲುದು, ಇದನ್ನು ತಪ್ಪಿಸಲು ಮುಂಜಾನೆಯ ಹಾಗೂ ಸಾಯಂಕಾಲದ ಬಿಸಿಲಿಗೆ ಮೈಒಡ್ಡುವುದು ಪ್ರಯೋಜನಕಾರಿ ಅಂತಾರೆ ವಿಜ್ಞಾನಿಗಳು.
🎙️ ಸೂರ್ಯ ನಮಸ್ಕಾರ
ಉದಯೇ ಬ್ರಹ್ಮರೂಪಾಯ, ಮಧ್ಯಾಹ್ನೇತು ಮಹೆಶ್ವರಃ
ಅಸ್ತಮಾನೇ ಸ್ವಯಂವಿಷ್ಣು ತ್ರಯೀಮೂರ್ತಿ ದಿವಾಕರ |
🎙️ ಸಂಕ್ರಾಂತಿ ಎಂದರೆ ಏನು
ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡು
ಉತ್ತರಾಯಣದ ದಿನ ಹಸ್ತೋದಕವಿಲ್ಲ.
ಏಕೆಂದರೆ ಈದಿನ ಯತಿಗಳು ಉಪವಾಸವಿರುತ್ತಾರೆ.
ಉತ್ತರಾಯಣ – ಸೂರ್ಯನು ಭೂಮಧ್ಯೆಯ ರೇಖೆಗೆ ಉತ್ತರಾಭಿಮುಖ ವಾಗಿ ಸಂಚರಿಸುವ ಕಾಲ. ಸಾಮಾನ್ಯವಾಗಿ ಜನವರಿ 14, 15ಕ್ಕೆ ಪ್ರಾರಂಭ ವಾಗುತ್ತದೆ. ಮಕರಕ್ಕೆ ಸೂರ್ಯನು ಪ್ರವೇಶಿಸಿದ ನಂತರ ಮುಂದಿನ ಮೂವತ್ತು ಘಳಿಗೆ ಬಹಳ ಪುಣ್ಯಕಾಲ. ಅದಕ್ಕೇ ಪಂಚಾಂಗ ದಲ್ಲಿ ಉತ್ತರಾಯಣ ಪುಣ್ಯಕಾಲದ ಸಮಯವನ್ನು ತಿಳಿಸಿರುತ್ತಾರೆ. ಉತ್ತರಾ ಯಣ ಪರ್ವಕಾಲದಲ್ಲಿ ಕರಿಎಳ್ಳು ಅರೆದು ಅದನ್ನು ಮೈಲಿಗೆ ಹಚ್ಚಿ- ಕೊಂಡು ಎಲ್ಲರೂ ಸ್ನಾನ ಮಾಡಬೇಕು. ಇದರಿಂದ ರೋಗದಿಂದ ದೂರ. ಉತ್ತರಾಯಣ ಪರ್ವಕಾಲದಲ್ಲಿ ಹೆಂಗಸರು ತಲೆಯ ಮೇಲೆ ಸ್ನಾನ ಮಾಡಬಾರದು. ಆದರೆ ಎಳ್ಳು ಮೈಗೆ ತಿಕ್ಕಿ ಸ್ನಾನ ಮಾಡಬೇಕು.
🎙️ ಮಕರ ಸಂಕ್ರಾಂತಿ ದಿನ
ಎಳ್ಳು ಹಚ್ಚಿ ಸ್ನಾನ, ಎಳ್ಳುದಾನ, ಎಳ್ಳು ಹೋಮ
ಎಳ್ಳು ಭಕ್ಷಣ, ಎಳ್ಳಿನಿಂದ ತರ್ಪಣ, ಎಳ್ಳೆಣ್ಣೆಯ ದೀಪ ಇವು ಬಹಳ ವಿಶೇಷ.
ಸಂಕ್ರಮಣ ಪರ್ವಕಾಲದಲ್ಲಿ ದ್ವಾದಶ ಪಿತೃಗಳಿಗೆ ತರ್ಪಣ ರೂಢಿಯಲ್ಲಿದೆ. ಸರ್ವಪಿತೃಗಳಿಗೂ ತರ್ಪಣ ಕೊಡಬೇಕು ಕನಿಷ್ಠ ದ್ವಾದಶಪಿತೃಗಳಿಗಾದರೂ ಕೊಡಬೇಕು.
🎙️ ಸಂಕ್ರಾಂತಿ ಎಂದರೇನು ?
ಸೂರ್ಯನ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಾಗುವುದನ್ನು ಸಂಕ್ರಮಣ ಎನ್ನುತ್ತಾರೆ.
🎙️ ಒಟ್ಟು ಎಷ್ಟು ಸಂಕ್ರಮಣಗಳಿವೆ?
ಒಟ್ಟು ಹನ್ನೆರಡು ಸಂಕ್ರಮಣಗಳಿವೆ.
🎙️ ಮಕರ ಸಂಕ್ರಮಣ ಎಂದರೇನು ?
ಸೂರ್ಯನು ಧನುರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ಸಮಯವನ್ನು ಮಕರ ಸಂಕ್ರಮಣ ಅಥವ ಉತ್ತರಾಯಣ ಪರ್ವಕಾಲವೆನ್ನುತ್ತಾರೆ.
🎙️ ಸಂಕ್ರಮಣದ ಪರ್ವಕಾಲವೆಂದರೇನು ?
ಸೂರ್ಯನು ಮತ್ತೊಂದು ರಾಶಿಯನ್ನು ಪ್ರವೇಶಿಸುವ ಸಮಯವನ್ನು ಸಂಕ್ರಮಣ ಪರ್ವಕಾಲವೆನ್ನುತ್ತಾರೆ.
ದಕ್ಷಿಣಾಯಣ ಪುಣ್ಯಕಾಲದಲ್ಲಿ ಉತ್ತರಾಯಣ ಮುಗಿಯುವ ಮುನ್ನದ ಕೆಲವು ಘಳಿಗೆಗ ಪ್ರಶಸ್ತ. ಉತ್ತರಾಯಣ ಪುಣ್ಯಕಾಲದಲ್ಲಿ ಮಕರ ರಾಶಿಯ ಪ್ರವೇಶಿಸಿದ ನಂತರದ ಘಳಿಗೆ ಪ್ರಶಸ್ತ.
🎙️ ಮಕರ ಸಂಕ್ರಮಣದ ಪರ್ವಕಾಲ ಎಷ್ಟು ಸಮಯವಿರುತ್ತದೆ ?
ಮಕರ ಸಂಕ್ರಮಣದ ಪರ್ವಕಾಲ ಸಂಕ್ರಮಣದ ನಂತರದ 16 ಘಳಿಗೆ (20
ಘಳಿಗೆ ಕೆಲವರ ಸಂಪ್ರದಾಯ). ಅರ್ಥಾತ್ ಒಂದು ಘಳಿಗೆ ಅಂದರೆ 48 ನಿಮಿಷ
🎙️ ಈ ಸಲದ ಮಕರ ಸಂಕ್ರಮಣದ ಪರ್ವಕಾಲ ಸಮಯ ಯಾವುದು ?
ಪುಣ್ಯ ಕಾಲ - 2023 ರ ಜನವರಿ 15 ರಂದು ಬೆಳಿಗ್ಗೆ 7.17 ರಿಂದ ಸಂಜೆ 5.55 ರವರೆಗೆ
ಮಹಾ ಪುಣ್ಯ ಕಾಲ - 2023 ರ ಜನವರಿ 15 ರಂದು ಬೆಳಿಗ್ಗೆ 7.17 ರಿಂದ 9.04 ರವರೆಗೆ
ಸುಕರ್ಮ ಯೋಗ - 2023 ರ ಜನವರಿ 14 ರಂದು ಮಧ್ಯಾಹ್ನ 12.33 ರಿಂದ ರಾತ್ರಿ 11.51 ರವರೆಗೆ
ಧೃತಿ ಯೋಗ - 2023 ರ ಜನವರಿ 16 ರಂದು ಬೆಳಿಗ್ಗೆ 11:51 ರಿಂದ 4:31 ರವರೆಗೆ.
ಸಂಕ್ರಮಣ ಕಾಲದಲ್ಲಿ ನದಿಯಲ್ಲಿ ಸ್ನಾನ ಮಾಡಿದರೆ ಶ್ರೇಷ್ಟ ಎನ್ನುತ್ತಾರೆ. ಆದರೆ ಅಲ್ಲಿಗೆ ಹೋಗಲು
🎙️ ಅನಾನುಕೂಲವಿರುವವರು ಏನು ಮಾಡಬೇಕು?
ಎಲ್ಲರೂ ಸಂಕ್ರಮಣ ಸಂದರ್ಭದಲ್ಲಿ ನದಿ ಸ್ನಾನಕ್ಕೆ ಹೋಗಲು, ಅಥವಾ ಬಾವಿಯಲ್ಲಿ ಸ್ನಾನ ಮಾಡಲು ಸಾಧ್ಯವಿಲ್ಲ. ಅಂತಹವರು ಮನೆಯಲ್ಲಿಯೇ ಗಂಗಾದಿ ಸಕಲ ತೀರ್ಥಾಭಿಮಾನಿ ದೇವತೆಗಳನ್ನು ನೆನೆದು ಸ್ನಾನ ಮಾಡತಕ್ಕದ್ದು.
🎙️ಮಕರ ಸಂಕ್ರಮಣದಂದು ಪೂಜೆಯನ್ನು ಸಂಕ್ರಮಣದ ನಂತರವೇ ಮಾಡಬೇಕೆ ಅಥವಾ ಮುನ್ನವೇ ಮಾಡಬಹುದೇ?
ಮಕರ ಸಂಕ್ರಮಣದಲ್ಲಿ ಪೂಜೆಯನ್ನು ಸಂಕ್ರಮಣಕ್ಕಿಂತ ಮುನ್ನವೇ ಮಾಡಬಹುದು. ನೈವೇದ್ಯವನ್ನೂ ಮಾಡಬಹುದು.
🎙️ಮಕರ ಸಂಕ್ರಮಣ ದಿನವೇ ಶ್ರಾದ್ಧ ಇದ್ದರೆ ಏನು ಮಾಡಬೇಕು ?
ಶ್ರಾದ್ಧವನ್ನು ಸಂಕ್ರಮಣ ಮುನ್ನವೂ ಮಾಡಬಹುದು. ಆ ಸಂದರ್ಭದಲ್ಲಿ ಮಾದಿದರೆ ಶ್ರೇಷ್ಟ.
🎙️ ದಾನವನ್ನು ಯಾವಾಗ ಕೊಡಬೇಕು ?
ದಾನವನ್ನು ಸಂಕ್ರಮಣ ಸಮಯದಲ್ಲಿ ಅಥವಾ ನಂತರ ಕೊಡಬಹುದು. ಅನುಕೂಲವಿದ್ದರೆ ದಾನ ಆ ಸಮಯದಲ್ಲೇ ಕೊಡಿ. ಎಲ್ಲದಿದ್ದರೆ ಮೀಸಲಿಟ್ಟು ನಂತರ ದಾನವನ್ನು ಕೊಡಬಹುದು.
🎙️ ತಂದೆಯಿರುವವರು, ಸ್ತ್ರೀಯರು, ಮಕ್ಕಳು ಬೆಳಿಗ್ಯೆ ಫಲಹಾರ ಮಾಡಬಹುದಾ?
ಅವರುಗಳು ಉಪವಾಸವಿರಬೇಕೆಂದಿಲ್ಲ. ಬೆಳಿಗ್ಯೆ ಪೂಜೆ ಮುಗಿಸಿ, ಹಣ್ಣು, ಫಲಹಾರ ಮಾಡಿ, ಸಂಕ್ರಮಣದ ನಂತರ ಭೋಜನ ಮಾಡತಕ್ಕದ್ದು.
🎙️ ಸ್ತ್ರೀಯರು, ಸಂಕ್ರಮಣ ಸಮಯದಲ್ಲಿ ತಲೆಗೆ ಸ್ನಾನ ಮಾಡಬಹುದಾ?
ಸ್ತ್ರೀಯರು ಯಾವ ಕಾಲದಲ್ಲೂ ಬರೀ ಸ್ನಾನವನ್ನು ಮಾಡುವಂತಿಲ್ಲ. ಎಣ್ಣೆ ನೀರು ಹಾಕಿಕೊಳ್ಳುವವರು ಮಾತ್ರ ತಲೆಗೆ ಸ್ನಾನ ಮಾಡಬಹುದು.
🎙️ಉತ್ತರಾಯಣ ಪರ್ವಕಾಲದಲ್ಲಿ ತಿಲದ ಪ್ರಾಮುಖ್ಯತೆ ಏನು ?
ಈ ಕಾಲದಲ್ಲಿ ಆರು ತಿಲ ಕರ್ಮಗಳನ್ನು ಮಾಡತಕ್ಕದ್ದು. ಅ) ತಿಲ ಸ್ನಾನ, ಆ) ತಿಲ ದೀಪ, ಇ) ತಿಲ ತರ್ಪಣ, ಈ) ತಿಲ ಹೋಮ, ಉ) ತಿಲ ದಾನ, ಊ) ತಿಲ ಭಕ್ಷಣ. ಸ್ನಾನ ಸಮಯದಲ್ಲಿ ತಿಲವನ್ನು ಹಚ್ಚಿಕೊಂಡು ಮಾಡಬೇಕು.
ಉತ್ತರಾಯಣ ಕಾಲದಲ್ಲಿ ಮಾಡಿದ ದಾನ ಸಾಮಾನ್ಯ ದಿನಗಳಲ್ಲಿ ಮಾಡಿದ ದಾನಕ್ಕಿಂತಲೂ ಕೋಟಿಪಾಲು ಪುಣ್ಯಪ್ರದ. ಯಥಾಶಕ್ತಿ ದಾನ ಮಾಡಬೇಕು. ಸಾಲವ ಮಾಡಾದರೂ ದಾನ ಮಾಡಬೇಕಾಗಿಲ್ಲ.
ಇಂದು ಗೋವು಼ಗಳನ್ನು ವಿಶೇಷವಾಗಿ ಪೂ಼ಜಿಸಬೇಕು. ಹಸುಗಳಿಗೆ ವಿಶೇಷವಾಗಿ ಸ್ನಾನ ಮಾಡಿಸಿ ಅರಿಶಿನ ಹಚ್ಚಿ, ಕೊಂಬುಗಳಿಗೆ ಮತ್ತು ಇಡೀ ಗೋವಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಮಾಡುತ್ತಾರೆ.
🎙️ ಎಳ್ಳು ಸ್ವೀಕಾರಕ್ಕೆ ವೈಜ್ಞಾನಿಕ ಕಾರಣ –
ಧನುರ್ಮಾಸದಲ್ಲಿ ದೇಹಕ್ಕೆ ಉಂಟಾಗುವ ತೊಂದರೆಗಳನ್ನು ನಿವಾರಿಸುವ ಉದ್ದೇಶದಿಂದ ಹುಗ್ಗಿಯನ್ನು ಸೇವಿಸುತ್ತೇವೆ. ಏಕೆಂದರೆ ಛಳಿಗಾಲವು ಧನುರ್ಮಾಸದಲ್ಲಿ ಉಲ್ಭಣವಾಗಿರುತ್ತೆ. ಈ ಕಾಲದಲ್ಲಿ ಮಲಬದ್ಧತೆಯಾಗಿ ತೊಂದರೆಯಾಗಿರುತ್ತೆ. ಏಕೆಂದರೆ ಛಳಿಗಾಲದಲ್ಲಿ ಶರೀರದಲ್ಲಿರುವ ಉಷ್ಣಾಂಶವು ಹೆಚ್ಚು ವ್ಯಯವಾಗಿ, ಅದನ್ನು ಸರಿ- ದೂಗಿಸಲು ವಾತಾವರಣವು ಸರಿಯಾಗಿರದೆ ಚರ್ಮ ಸುಕ್ಕು ಕಟ್ಟುತ್ತದೆ಼. ಎರಡನೆಯದಾಗಿ ಯಾವಾಗ ಚರ್ಮದ ಉಷ್ಣಾಂಶವು ಕಮ್ಮಿಯಾಗತ್ತೋ ಆಗ ಚರ್ಮ ಬಿರಿಯತ್ತೆ. ಶಾಸ್ತ್ರದ ಪ್ರಕಾರ ಹುಗ್ಗಿಯನ್ನು ಪ್ರಾತ: ಕಾಲ ಸೇವಿಸಿದರೆ ಮೇಲೆ ಹೇಳಿದ ಶರೀರದ ಕೊರತೆಯೆಲ್ಲ ಸರಿದೂಗುತ್ತೆ. ಧನುರ್ಮಾಸ ಕಳೆದು ಮಕರ ಮಾಸ ಆರಂಭವಾಗುವವರೆಗೆ ಮನುಷ್ಯನ ದೇಹದಲ್ಲಿನ ಕೊಬ್ಬಿನ ಅಂಶ ಅವಶ್ಯಕತೆಯಷ್ಟು ಇರುವುದಿಲ್ಲ. ಕಮ್ಮಿ ಇರತ್ತೆ. ಉತ್ತರಾಯಣಕಾಲದಿಂದ ಶೆಖೆ ಪ್ರಾರಂಭವಾಗುವುದರಿಂದ ಈ ದೇಹಕ್ಕೆ ಅತ್ಯವಶ್ಯಕವಾದ ಕೊಬ್ಬಿನ ಅಂಶ ಸರಿದೂಗದಿದ್ದರೆ ಮುಂದೆ ಬಿಸಿಲಿನ ತಾಪದಿಂದ ಅನೇಕ ತೊಂದರೆಯಾಗುತ್ತೆ. ಇದನ್ನು ತಪ್ಪಿಸಲು ಮುಂಜಾಗರೂಕತೆಗಾಗಿ ಎಳ್ಳನ್ನು ಉಪಯೋಗ ಮಾಡಬೇಕು. ವೈದ್ಯ ಶಾಸ್ತ್ರ ಮತ್ತು ಆಹಾರಶಾಸ್ತ್ರ ಪ್ರಕಾರ ಶರೀರದ ಚರ್ಮ, ನೇತ್ರ, ಮತ್ತು ಅಸ್ತಿ ಇವು಼ಗಳ ಬೆಳವಣಿಗೆಗೆ ಬೇಕಾದ ’ಎ’ ಮತ್ತು ’ಬಿ’ ವಿಟಮಿನ್ಸ್ ಕೊಬ್ಬಿನಲ್ಲಿವೆ. ತೈಲಧಾನ್ಯವಾದ ಎಳ್ಳಿನಲ್ಲಿ ಈ ವಿಟಮಿನ್ಸ್ ಹೇರಳವಾಗಿರುವುದ ರಿಂದ ಎಳ್ಳು ಒಳ್ಳೆಯದು.
ವಿಟಮಿನ್ ಡಿ ಸೂರ್ಯನ ಬೆಳಕಿನಿಂದ ದೇಹದಿಂದ ಉತ್ಪತ್ತಿಯಾಗುತ್ತದೆ.
ಎಳ್ಳು ಬೀಜಗಳು ಅತ್ಯಧಿಕ ಕ್ಯಾಲ್ಸಿಯಂ ಅನ್ನು ಹೊಂದಿರುತ್ತವೆ (100g ಗೆ 975mg). ಹಾಲಿನಲ್ಲಿ 125 ಮಿಗ್ರಾಂ ಮಾತ್ರ ಇರುತ್ತದೆ.
ದೇಹವು ವಿಟಮಿನ್ ಡಿ ಅನ್ನು ಒಂದು ವರ್ಷದವರೆಗೆ ಸಂಗ್ರಹಿಸುವ ಸಾಮರ್ಥ್ಯವನ್ನು ಹೊಂದಿದೆ ಮತ್ತು ಮೀಸಲುಗಳನ್ನು ಬಳಸುತ್ತದೆ.
ಕೊನೆಯದಾಗಿ, ದೇಹವು ತನ್ನ ವಿಟಮಿನ್ ಡಿ ಮೀಸಲುಗಳನ್ನು 3 ಪೂರ್ಣ ದಿನಗಳ ಸೂರ್ಯನ ಬೆಳಕಿನಿಂದ ಪೂರ್ಣವಾಗಿ ಪಡೆಯುವ ಸಾಮರ್ಥ್ಯವನ್ನು ಹೊಂದಿದೆ.
ಸೂರ್ಯನ ಬೆಳಕಿನ ಉತ್ತಮ ಗುಣಮಟ್ಟವೆಂದರೆ ಚಳಿಗಾಲದ ಅಂತ್ಯ ಮತ್ತು ಬೇಸಿಗೆಯ ಆರಂಭ.
ಈಗ ಚುಕ್ಕೆಗಳನ್ನು ಸೇರಿಕೊಳ್ಳಿ ಮತ್ತು ಪ್ರಾಚೀನ ಭಾರತದಲ್ಲಿ ನಮ್ಮ ಋಷಿಗಳು ಎಷ್ಟು ಬುದ್ಧಿವಂತರಾಗಿದ್ದರು ಎಂಬುದನ್ನು ನೋಡಿ.
ಅವರು ಗಾಳಿಪಟಗಳನ್ನು ಹಾರಿಸುವ ಹಬ್ಬವನ್ನು ರಚಿಸಿದರು, ಅಲ್ಲಿ ನಮ್ಮ ಮಕ್ಕಳು ಮುಂಜಾನೆಯಿಂದ ಪ್ರಾರಂಭವಾಗುವ ದಿನವಿಡೀ ತೆರೆದ ಸೂರ್ಯನ ಬೆಳಕಿನಲ್ಲಿ ಹೋಗಲು ಉತ್ಸುಕರಾಗುತ್ತಾರೆ. ಮತ್ತು ಅವರ ತಾಯಂದಿರು ಅವರಿಗೆ ಮನೆಯಲ್ಲಿ ತಯಾರಿಸಿದ ಟಿಐಎಲ್ ಲಾಡೂಗಳನ್ನು ತಿನ್ನಿಸುತ್ತಾರೆ.
*ನಮ್ಮದು ಅದ್ಭುತ ಸಂಸ್ಕೃತಿಯಲ್ಲವೇ?*
*ಮಕರ ಸಂಕ್ರಾಂತಿ - ಭಾರತದಲ್ಲಿ ಗಾಳಿಪಟ ಹಾರಿಸುವ ಹಬ್ಬ ಜನವರಿ 14 ರಂದು*
🎙️ “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡು”.
ನವಗ್ರಹಗಳಿಗೆ ನವಧಾನ್ಯ ಹೇಳುತ್ತಾರೆ. ನವಧಾನ್ಯಗಳಲ್ಲಿ ಎಳ್ಳು ಮಾತ್ರ ತೈಲಧಾನ್ಯ. ಉಳಿದವು಼ ಯಾವು಼ದೂ ತೈಲಧಾನ್ಯವಲ್ಲ. ಆದ್ದರಿಂದ ಎಳ್ಳನ್ನು ತಿನ್ನಬೇಕೆಂದಿದ್ದಾರೆ, ಬರೀ ಎಳ್ಳು ತಿಂದರೆ ಪಿತ್ತ ಜಾಸ್ತಿಯಾಗತ್ತೆ. ಅದಕ್ಕೇ ಪಿತ್ತಹರವಾದ ಬೆಲ್ಲವನ್ನೂ ಸೇರಿಸಿ ತೆಗೆದುಕೊಂಡರೆ ಕೊಬ್ಬಿನ ಅಂಶ ಸರಿದೂಗುತ್ತೆ.
ಸ್ವಭಾವತ: ಬೆಲ್ಲವೂ ಪಿತ್ತದ ಗುಣವುಳ್ಳದಾದ್ದರಿಂದ ಎಳ್ಳಿನ ಜೊತೆ ತೆಗೆದುಕೊಂಡರೆ ಪಿತ್ತವನ್ನು ಸ್ಥಿಮಿತದಲ್ಲಿಡುತ್ತೆ. “ಉಷ್ಣೇನ ಉಷ್ಣಂ ಶೀತಲಂ” ಎನ್ನುವ ಹಾಗೆ ಪಿತ್ತವನ್ನು ಪಿತ್ತದಿಂದ ನಾಶ ಮಾಡುವುದೇ ಎಳ್ಳುಬೆಲ್ಲ. ಹಸಿ ಎಳ್ಳಿನ ದೋಷ ನಿವಾರಣೆಗಾಗಿ ಹುರಿದು ಉಪಯೋಗಿಸಬೇಕು. ಇದರ ಜೊತೆಗೆ ರುಚಿಗೋಸ್ಕರ, ಕೊಬ್ಬಿನ ಅಂಶ ವಿರುವ ಕಡ್ಲೇಕಾಯಿಬೀಜವನ್ನು ಬೆರೆಸಿ ತಿನ್ನಬೇಕೆಂದಿದ್ದಾರೆ. ಎಳ್ಳಿಗೆ ವಾತ, ವ್ರಣ, ಮತ್ತು ಚರ್ಮರೋಗ ನಿವಾರಣೆ ಮಾಡುವ ಗುಣವಿದೆ. ರಕ್ತವೃದ್ಧಿ ಮಾಡುತ್ತೆ.
🎙️ ಸಂಕ್ರಾಂತಿ ಹಬ್ಬದ ದಿನ ಪಾಠನೇ :
ಸೂರ್ಯ ಸ್ತೋತ್ರ
ಆದಿತ್ಯ ಹೃದಯಂ
ಸೂರ್ಯ ಅಷ್ಟಕಂ
ಸೂರ್ಯ ಮಂಡಲ ಸ್ತೋತ್ರ
ಸೂರ್ಯ ಅಷ್ಟೋತ್ತರ .…
ಶ್ರೀ ಸೂರ್ಯ ಪ್ರಾತ:ಸ್ಮರಣ ಸ್ತೋತ್ರಮ್
ಸೂರ್ಯ ದ್ವಾದಶ ಸ್ತೋತ್ರ
ಆದಿತ್ಯ ಸ್ತೋತ್ರ
ಹರಿಯೇ ಪರದೈವ 🙏
ಜಗತ್ತು ಸತ್ಯ
ಓಂ ಶ್ರೀ ಸ್ವಾಮಿಯೇ ಶರಣಂ ಅಯ್ಯಪ್ಪ
30/12/2025
ತಿರುಪತಿ ತಿರುಮಲ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ಈ ದಿನದ ಅಲಂಕಾರ ಹಾಗೂ ವೈಭವ ವೈಭೋಗ ದರ್ಶನ ಪಡೆದು ಪ್ರತಿಯೊಬ್ಬರಿಗೂ ಶೇರ್ ಮಾಡಿ
ವೈಕುಂಠ ಏಕಾದಶಿ
ಧನುರ್ಮಾಸದಲ್ಲಿ ಬರುವ ಅಂದರೆ ಸಾಮಾನ್ಯವಾಗಿ ಮಾರ್ಗಶಿರ ಪುಷ್ಯ ಮಾಸದ ಶುಕ್ಲಪಕ್ಷದ ಏಕಾದಶಿಯಂದು ವೈಕುಂಠ ಏಕಾದಶಿ ಆಚರಿಸಲಾಗುತ್ತದೆ. ಅಂದು ವೈಕುಂಠದ ಉತ್ತರ ಬಾಗಿಲ ಮೂಲಕ ನಾರಾಯಣ ಮುಕ್ಕೋಟಿ ದೇವತೆಗಳಿಗೆ ದರ್ಶನ ನೀಡುತ್ತಾನೆ ಎಂಬುದು ಪ್ರತೀತಿ. ಅದೇ ಕಾರಣಕ್ಕೆ ವೈಷ್ಣವ ಆಲಯಗಳಲ್ಲಿ ವಿಶೇಷವಾಗಿ ವೈಕುಂಠ ದ್ವಾರ ರೂಪಿಸಿ, ಭಕ್ತರಿಗೆ ಪ್ರವೇಶ ಕಲ್ಪಿಸಿರುತ್ತಾರೆ
ಏಕಾದಶಿಗೆ ಸಂಬಂಧಿಸಿದ ಕೃಷ್ಣಕಥೆ ಭಾಗವತದಲ್ಲಿ ಬಂದಿದೆ.
ನಂದಗೋಪನು ಶ್ರೀಕೃಷ್ಣನ ಸನ್ನಿಧಾನದಲ್ಲಿ ಏಕಾದಶಿ ವ್ರತವನ್ನು ತಪ್ಪದೇ ಆಚರಿಸುತ್ತಿದ್ದ. ಒಮ್ಮೆ ಏಕಾದಶಿ ವ್ರತಮಾಡಿ ಮರುದಿನ ಅಲ್ಪದ್ವಾದಶಿ ಇದ್ದುದರಿಂದ ನಸುಕಿನಲ್ಲಯೇ ಯಮುನಾ ನದಿಯಲ್ಲಿ ಸ್ನಾನಕ್ಕೆ ಇಳಿಯುತ್ತಾನೆ.
ಆ ಸಮಯ ಇನ್ನೂ ರಾಕ್ಷಸರ ಸಂಚಾರಕಾಲವಾಗಿತ್ತು. ರಾತ್ರಿ ಕಾಲದಲ್ಲಿ ನದೀ ಸ್ನಾನಕ್ಕೆ ಹೋಗಬಾರದು. ಆ ತಪ್ಪಿಗೆ ಶಿಕ್ಷೆಯಾಗಿ ವರುಣನ ಭೃತ್ಯನೊಬ್ಬ ನಂದಗೋಪನನ್ನು ಎಳೆದುಕೊಂಡು ವರುಣ ಲೋಕಕ್ಕೆ ಬರುತ್ತಾನೆ. ಇತ್ತ ನಂದಗೋಪ ಸ್ನಾನಕ್ಕೆಂದು ನದಿಗೆ ಹೋದ ನಂದಗೋಪ ಬಾರದೇ ಇದ್ದುದರಿಂದ ಗೋಪಾಲಕರೆಲ್ಲ ಚಿಂತಿತರಾಗಿ ಕೃಷ್ಣ ಬಲರಾಮರಿಗೆ ತಿಳಿಸುತ್ತಾರೆ.
ಶ್ರೀಕೃಷ್ಣನು ವಿಷಯ ತಿಳಿದವನಾಗಿ ಎಲ್ಲ ಗೋಪಾಲಕರಿಗೆ ಅಭಯವನ್ನು ಕೊಡುತ್ತಾನೆ. ಕೃಷ್ಣಾವತಾರದಲ್ಲಿ ತಂದೆಯಾದ ನಂದಗೋಪನನ್ನು ಕರೆತರುವದಾಗಿ ಗೋಪಾಲಕರಿಗೆ ತಿಳಿಸಿ ವರುಣಲೋಕಕ್ಕೆ ಹೋಗುತ್ತಾನೆ.
ವರುಣಲೋಕದಲ್ಲಿ ಶ್ರೀಕೃಷ್ಣನನ್ನು ನೋಡಿದ ವರುಣ ಸಂತೋಷದಿಂದ ಬರಮಾಡಿಕೊಳ್ಳುತ್ತಾನೆ, ತನ್ನ ಸೇವಕನಿಂದ ಆದ ಪ್ರಮಾದವನ್ನು ಕ್ಷಮಿಸುವಂತೆ ಶ್ರೀಕೃಷ್ಣನಲ್ಲಿ ಪ್ರಾರ್ಥಿಸುತ್ತಾನೆ. ಶ್ರೀಕೃಷ್ಣ ವರುಣನಿಗೆ ಆಶೀರ್ವದಿಸಿ ನಂದಗೋಪನೊಂದಿಗೆ ಯಮುನಾತೀರಕ್ಕೆ ಬರುತ್ತಾನೆ.
ಗೋಪಾಲಕರಿಗೆ ನಂದಗೋಪನು ವರುಣಲೋಕದಲ್ಲಿ ಕಂಡ ಶ್ರೀಕೃಷ್ಣನ ನಿಜರೂಪವನ್ನು ಮತ್ತು ಅಲ್ಲಿ ದೊರೆತ ಭವ್ಯ ಸ್ವಾಗತವನ್ನು ವರ್ಣಿಸುತ್ತಿದ್ದರೆ ಎಲ್ಲ ಗೋಪಾಲಕರು ಭಕ್ತಿಯುಕ್ತರಾಗಿ ಆಲಿಸುತ್ತಿದ್ದರು. ನಮಗೆ ಶ್ರೀಮನ್ನಾರಾಯಣನ ದಿವ್ಯದರ್ಶನದ ಭಾಗ್ಯ ಇಲ್ಲವಾಯಿತಲ್ಲ ಎಂದು ಪರಿತಪಿಸುತ್ತಿದ್ದರು.
ಇದನ್ನು ತಿಳಿದ ಶ್ರೀಕೃಷ್ಣ ಎಲ್ಲ ಗೋಪಾಲಕರಿಗೆ ಯಮುನಾತೀರ್ಥದ ಬ್ರಹ್ಮಕುಂಡದಲ್ಲಿ ಸ್ನಾನ ಮಾಡಿ ಬರುವಂತೆ ತಿಳಿಸಿದ. ಗೋಪಾಲಕರು ಸ್ನಾನಮಾಡಿ ಬರುತ್ತಿದ್ದಂತೆ ವೈಕುಂಠಲೋಕ ಗೋಚರಿಸಿತು. ಶ್ರೀಕೃಷ್ಣನ ದಿವ್ಯವಾದ ಅನೇಕ ರೂಪಗಳು ಅವರಿಗೆ ಕಂಡವು.
ಮುಕ್ಕೋಟಿ ದ್ವಾದಶಿ ಅಂದರೇನು?
ಧನುರ್ಮಾಸದಲ್ಲಿ ಬರುವ ಶುದ್ಧ ದ್ವಾದಶಿಯಂದು ಮುಕ್ಕೋಟಿ ದ್ವಾದಶಿ ಆಚರಿಸುತ್ತಾರೆ. ಏಕಾದಶಿಯ ಮರು ದಿನ ದ್ವಾದಶಿ. ಮೂವತ್ತ್ಮೂರು ಕೋಟಿ ದೇವತೆಗಳು ಅಂದು ತಿರುಮಲದ ದೇವಾಲಯ ಪಕ್ಕದಲ್ಲಿರುವ ಸ್ವಾಮಿ ಪುಷ್ಕರಣಿಯಲ್ಲಿ ತೀರ್ಥ ಸ್ನಾನ ಮಾಡುತ್ತಾರೆ. ಆದ್ದರಿಂದ ಮುಕ್ಕೋಟಿ ದ್ವಾದಶಿ ಎಂಬ ಹೆಸರಿದೆ.
ಯಾವ ಕ್ಷೇತ್ರದಲ್ಲಿ ವಿಷ್ಣುವಿನ ದರ್ಶನ ಮಾಡಿದರೆ ಶ್ರೇಷ್ಠ?
ಸ್ವಯಂವ್ಯಕ್ತ ಕ್ಷೇತ್ರಗಳಲ್ಲಿ ಮಹಾವಿಷ್ಣುವಿನ ದರ್ಶನ ಮಾಡುವುದು ಶ್ರೇಷ್ಠ. ಅವುಗಳು – ತಿರುಮಲ, ಶ್ರೀಮೂಷ್ಣಂ, ತೋತಾದ್ರಿ, ಶ್ರೀರಂಗ, ಇತ್ಯಾದಿ. ಇಲ್ಲಿ ಮಾಡಲಾಗದಿದ್ದರೆ ವೈಷ್ಣವ ಸಂಪ್ರದಾಯದ ದೇವಸ್ಥಾನ ಗಳಲ್ಲಿ ಕೂಡ ಮಾಡಬಹುದು.
ಪ್ರಶ್ನೋತ್ತರ ವೈಕುಂಠ ಏಕಾದಶಿ ಬಗ್ಗೆ :
೧. ವೈಕುಂಠ ಏಕಾದಶಿ ಎಂದು ಆಚರಿಸಲಾಗುತ್ತದೆ?
*ಉತ್ತರ* – ಧನುರ್ಮಾಸದಲ್ಲಿ ಬರುವ ಶುಕ್ಲ ಪಕ್ಷದ ಏಕಾದಶಿ (ಸಾಮಾನ್ಯವಾಗಿ ಮಾರ್ಗಶಿರ ಅಥವಾ ಪುಷ್ಯ ಮಾಸದಲ್ಲಿ) ಆಚರಿಸಲಾಗುತ್ತದೆ.
೨. ವೈಕುಂಠ ಏಕಾದಶಿಯಂದು ಉಪವಾಸ ಮಾಡಬೇಕಾ ? ಫಲಾಹಾರ ಮಾಡಬಹುದಾ
*ಉತ್ತರ* – ಎಲ್ಲಾ ಏಕಾದಶಿಯಂದೂ ಉಪವಾಸ ಮಾಡಬೇಕು.
ಅಶಕ್ತರು, ಬಸುರಿ, ಬಾಣಂತಿಯರು, ಎಂಟು ವರ್ಷದ ಒಳಗಿನವರು ಮತ್ತು ಎಂಭತ್ತು ದಾಟಿದವರು ಫಲಾಹಾರ ಮಾಡಬಹುದು. ಬೇರೆ ಕಾರಣಗಳಿಂದ ಉಪವಾಸ ಮಾಡಲಾಗದವರು ಹಣ್ಣೂ ಸಜ್ಜಿಗೆ ಮುುಂತಾದ ಉಪ್ಪು ರಹಿತ ಪದಾರ್ಥ ತಿನ್ನಬಾರದು.
೩. ಕೆಲವು ದೇವಸ್ಥಾನಗಳಲ್ಲಿ ನೈವೇದ್ಯ ರೂಪದಲ್ಲಿ ಪೊಂಗಲ್, ಹುಗ್ಗಿ, ಚಿತ್ರಾನ್ನ ಇತ್ಯಾದಿ ಕೊಡುತ್ತಾರಲ್ಲ ಅದನ್ನು ತಿನ್ನಬಹುದೆ?
*ಉತ್ತರ* – ತಿನ್ನಬಾರದು. *ಮಾಧ್ವ ಸಂಪ್ರದಾಯದ* ಯಾವ ದೇವಸ್ಥಾನದಲ್ಲೂ ಕೊಡುವುದಿಲ್ಲ. ಅಕಸ್ಮಾತ್ ಅವರೇನಾದರೂ ಕೊಟ್ಟರೆ ಅವರಿಗೆ ಕೊಡಬಾರದೆಂದು ಹೇಳಿ.
೪. ಏಕಾದಶಿಯಂದು ತೀರ್ಥ ಎಷ್ಟು ಸಲ ತೆಗೆದುಕೊಳ್ಳಬೇಕು.
*ಉತ್ತರ* – ನಿರ್ಮಾಲ್ಯ ಒಂದು ಸಾರೀ ಮತ್ತು ತೀರ್ಥ ಒಂದು ಸಾರಿ ಮಾತ್ರ.
೫. ಮನೆಯಲ್ಲಿ ತೀರ್ಥ ತೆಗೆದುಕೊಂಡವರು ದೇವಸ್ಥಾನದಲ್ಲೂ ತೆಗೆದುಕೊಳ್ಳಬಹುದಾ?
*ಉತ್ತರ* – ಮನೆಯಲ್ಲಿ ತೆಗೆದುಕೊಂಡಿದ್ದರೆ ಏಕಾದಶಿಯಂದು ಅಲ್ಲಿ ಸ್ವೀಕರಿಸಬೇಡಿ.
೬. ವೈಕುಂಠ ಏಕಾದಶಿಯಂದು ಉಪವಾಸ ಮಾಡಿದರೆ ಏನು ಫಲ?
*ಉತ್ತರ* – ವೈಕುಂಠ ಏಕಾದಶಿಯಂದು ಉಪವಾಸ ಮಾಡಿದರೆ ಒಂದು ವರ್ಷದ ೨೪ ಏಕಾದಶಿ ಉಪವಾಸ ಮಾಡಿದ ಫಲ. ಪ್ರತಿ ಏಕಾದಶಿಯೂ ಉಪವಾಸ ಮಾಡಲೇಬೇಕು.
7. ದಿನತ್ರಯ ಎಂದರೇನು?
ಉತ್ತರ – ದಶಮಿ, ಏಕಾದಶಿ, ದ್ವಾದಶಿ ಈ ಮೂರೂ ದಿನಗಳನ್ನು ದಿನತ್ರಯವೆನ್ನುತ್ತಾರೆ.
8. ಏಕಾದಶಿ ಶ್ರಾದ್ಧ ಏಕಾದಶಿಯಂದೇ ಮಾಡಬಹುದಾ?
ಉತ್ತರ – ಏಕಾದಶಿಯಂದು ಶ್ರಾದ್ಧ ಮಾಡಬಾರದು. ದಶಮೀ ಅಥವಾ ದ್ವಾದಶಿ ಮಾಡಬೇಕು (ನಿಮ್ಮ ಮಠದ ಪಂಚಾಂಗದಲ್ಲಿ ಶ್ರಾದ್ಧ ಕಾಲಂ ನೋಡಿ)
9. ಏಕಾದಶಿ ಆಚರಿಸಿದ ಕೆಲವು ಭಾಗವತೋತ್ತಮರ ಹೆಸರು ತಿಳಿಸಿ.
*ಉತ್ತರ* – ಭೀಮಸೇನ, ದೂರ್ವಾಸರು, ಅಂಬರೀಷ, ರುಕ್ಮಾಂಗದ ಮುಂತಾದವರು.
10. ದೂರ್ವಾಸರು ಅಂಬರೀಷನಿಗಿಂತ ದೊಡ್ಡವರಾದರೂ ಅವರು ಏಕಾದಶಿಯ ಅನುಸರಿಸಲಿಲ್ಲವೇಕೆ?
ಉತ್ತರ – ದೂರ್ವಾಸರು ರುದ್ರದೇವರ ಅವತಾರ. ಪರಮ ವೈಷ್ಣವರು. ಆದರೆ ಅವರು ಅಂಬರೀಷನ ಏಕಾದಶಿ ಮಹತ್ವ ತಿಳಿಸಬೇಕಿತ್ತು. ಅದಕ್ಕೇ ಪರಮಾತ್ಮನ ಪ್ರೇರಣಾನುಸಾರ ಹಾಗೆ ಮಾಡಿರುತ್ತಾರೆ .
11. ಏಕಾದಶಿ ಅಭಿಮಾನಿ ದೇವತೆ ಯಾರು?
ದಶಮಿ, ಏಕಾದಶಿ ಮತ್ತು ದ್ವಾದಶಿಗೆ ಶ್ರೀಹರಿಯೇ ಅಭಿಮಾನಿ ದೇವತೆ.
ಸಂಗ್ರಹ ಮಾಹಿತಿ
▬▬▬ஜ۩۞۩ஜ▬▬▬*▬▬▬ஜ۩۞۩ஜ▬▬
ಧಮೋ೯ ರಕ್ಷತಿ ರಕ್ಷಿತ:* ಕೃಷ್ಣಾರ್ಪಣಮಸ್ತು
ಸರ್ವಜನಾಃ ಸುಖಿನೋಭವತು
▬▬▬ஜ۩۞۩ஜ▬▬▬▬▬▬ஜ۩۞۩ஜ▬▬▬ವೈಕುಂಠ ಏಕಾದಶಿ
02-01-2023 ಸೋಮವಾರ
*************************
“ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರಿದೆ ಎಂದು ತಿಳಿದುಬರುತ್ತದೆ, ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.
ಇನ್ನು “ಏಕಾದಶಿ” ಎಂದರೆ
ಚಾಂದ್ರಮಾನದ ಹನ್ನೊಂದನೆಯ ತಿಥಿ ಎಂದೂ ಸ್ಥೂಲವಾಗಿ ಹೇಳಬಹುದು. “ಏಕಾದಶಿ” ಒಂದು ವ್ರತ.
ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು.
ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು.
ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು.
ಎಂದರೆ ಶುಚಿರ್ ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.
ಇದರಿಂದ ಏಕಕಾಲಕ್ಕೆ ದೇಹಕ್ಕೆ ವಿಶ್ರಾಂತಿ, ಮನಸ್ಸಿಗೆ ಭಗವನ್ನಾಮ ಸ್ಮರಣೆಯಿಂದ ಶಾಂತಿ ದೊರೆಯುತ್ತದೆ.
ಹೀಗೆ ಎಡಬಿಡದೆ ಏಕಾದಶಿವ್ರತ ಮಾಡುವುದರಿಂದ ದೇಹದ ಮತ್ತು ಮನಸ್ಸಿನ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು. ಮಹಾಕವಿ ಕಾಳಿದಾಸ ಹೇಳಿರುವಂತೆ : “ಶರೀರಮಾಧ್ಯಂ ಖಲು ಧರ್ಮಸಾಧನಂ”, ಧರ್ಮ ಸಂಪಾದನೆಗೆ, ಸ್ವಸ್ಥ್ಯ ಶರೀರ ಅತ್ಯಗತ್ಯ.
ವೈಕುಂಠ ಏಕಾದಶಿಯ ಬಗ್ಗೆ ಕಥೆ ಇಂತಿದೆ :
ಭಾಗವತೋತ್ತಮನಾದ ನಂದಗೋಪನು ಶ್ರೀಕೃಷ್ಣನ ಸಾನಿಧ್ಯದಲ್ಲಿ, ಏಕಾದಶಿಯ ಉಪವಾಸ ಹಾಗೂ ದ್ವಾದಶಿಯ ಪಾರಣೆಗಳನ್ನು ತಪ್ಪದೆ ಆಚರಿಸುತ್ತಿದ್ದನು.
ಒಮ್ಮೆ ಏಕಾದಶಿವ್ರತ ಆಚರಿಸಿ, ಮರುದಿನ ದ್ವಾದಶಿ ಬಹು ಸ್ವಲ್ಪಕಾಲ ಮಾತ್ರ ಇದ್ದುದ್ದರಿಂದ ಬೆಳಗಿನ ಝಾವಕ್ಕೆ ಮೊದಲು ಯಮುನಾನದಿಯಲ್ಲಿ ಸ್ನಾನಕ್ಕಿಳಿದ.
ಅದು ರಾಕ್ಷಸರ ಸಂಚಾರದ ಕಾಲವಾದ್ದರಿಂದ ವರುಣದೇವನ ಸೇವಕನಾದ ರಾಕ್ಷಸ, ನಂದಗೋಪನನ್ನು ವರುಣನ ಬಳಿಗೆ ಎಳೆದೊಯ್ದನು.
ಇತ್ತ ನಂದನು ಎಷ್ಟು ಹೊತ್ತಾದರೂ ಸ್ನಾನಕ್ಕೆ ಹೋದವನು ಬಾರದಿರಲು, ಗೋಪಾಲಕುಲದವರೆಲ್ಲಾ ಬಲರಾಮಕೃಷ್ಣರಿಗೆ ಈ ಸುದ್ಧಿ ಮುಟ್ಟಿಸಿದರು.
ಸರ್ವಜ್ಞನಾದ ಶ್ರೀಕೃಷ್ಣ ಅವರಿಗೆಲ್ಲಾ ಅಭಯವಿತ್ತು ತಂದೆಯವರನ್ನು ಕರೆತರುವುದಾಗಿ ಹೇಳಿ, ವರುಣಲೋಕಕ್ಕೆ ಬಂದನು.
ದೇವದೇವನಾದ ಶ್ರೀಕೃಷ್ಣನಿಗೆ ನಮಿಸಿದ ವರುಣ ತನ್ನ ಸೇವಕನಿಂದಾದ ಅಪರಾಧ ಮನ್ನಿಸಬೇಕೆಂದು ಪ್ರಾರ್ಥಿಸಿದ.
ಶ್ರೀಕೃಷ್ಣ ವರುಣನನ್ನು ಆಶೀರ್ವದಿಸಿ ತಂದೆಯೊಡನೆ ಗೋಕುಲಕ್ಕೆ ಹಿಂದಿರುಗಿದನು.
ನಂದಗೋಪನಿಗೆ ಪರಮಾನಂದವಾಯಿತು.
ವರುಣನ ಲೋಕದ ವೈಭವ ಹಾಗೂ ತನ್ನ ಮಗನಾದ ಶ್ರೀಕೃಷ್ಣನಿಗೆ ಸಿಕ್ಕ ಭವ್ಯಸ್ವಾಗತ ಮುಂತಾದವುಗಳನ್ನು ಎಳೆಎಳೆಯಾಗಿ ಬಣ್ಣಿಸಲಾಗಿ ಗೋಪಾಲರಿಗೆಲ್ಲಾ ಹೆಮ್ಮೆ ಎನಿಸಿತು ಆದರೆ ಶ್ರೀಕೃಷ್ಣ ಸಾಕ್ಷತ್ ಪರಮೇಶ್ವರನೇ ನಿಜ ಆದರೆ ಅವನ ನಿಜ ರೂಪ ಅರಿಯಲಾರೆವು ಎಂದು ಪರಿತಪಿಸಿದರು.
ಇದನ್ನರಿತ ಕೃಷ್ಣ, ಎಲ್ಲರಿಗೂ ಯಮುನಾ ನದಿಯಲ್ಲಿದ್ದ ಬ್ರಹ್ಮಕುಂಡವೆಂಬ ಮಡುವಿನಲ್ಲಿ ಮುಳುಗಿಬರುವಂತೆ ತಿಳಿಸಿದ, ಅದರಂತೆ ಅವರೆಲ್ಲಾ ಮಾಡಲಾಗಿ ಅವರ ಕಣ್ಣಿಗೆ ವೈಕುಂಠ ಕಾಣಿಸಿತು,
ಅವರ ಮನಸ್ಸು ತೃಪ್ತಿಯನ್ನು ಹೊಂದಿತು, ಶ್ರೀಕೃಷ್ಣನು ಪರದೈವವೆಂಬ ಅವರ ನಂಬಿಕೆ ಸ್ಥಿರವಾಯಿತು ಎಲ್ಲರೂ ಧನ್ಯರಾದರು ಬಹುಶಃ ಈ ಕಾರಣಕ್ಕೆ ಏಕಾದಶಿಯನ್ನು “ವೈಕುಂಠಏಕಾದಶಿ” ಎಂದು ಕರೆದಿರಬಹುದೆಂದು ಊಹಿಸಬಹುದು.
ಪುರಾಣಗಳಿಗೆ ಮಹತ್ವವಾದ ಸ್ಥಾನವಿದೆ, ಅವು ಜನಜೀವನಕ್ಕೆ ಹೊಂದಿಕೊಂಡು ಹೋಗುವ ವಿಷಯಗಳನ್ನು ಪ್ರತಿಪಾದಿಸುತ್ತವೆ. ಸಾಮಾನ್ಯಜನರಿಗೆ ಅವುಗಳಿಂದ ಉಪಕಾರವಾಗುತ್ತದೆ.
ಲೋಕೋಪಕಾರಕ್ಕಾಗಿ ವ್ಯಾಸರು ಹದಿನೆಂಟು ಪುರಾಣಗಳನ್ನು ರಚಿಸಿದರು. ಇಂತಹ ಪುರಾಣಗಳಲ್ಲಿ ನಾರದೀಯ ಪುರಾಣ ಸಹ ಒಂದು ನಾರದರ ಪ್ರೇರಣೆಯಿಂದ ಅನೇಕ ಪವಿತ್ರ ಗ್ರಂಥಗಳ, ಪೂಜೆ ಪುನಸ್ಕಾರಗಳು, ವ್ರತಕಥೆಗಳೂ, ಈ ಜಗತ್ತಿಗೆ ಬಂದಿದೆ ಎಂದರೆ ಅತಿಶಯೋಕ್ತಿ ಆಗಲಾರದು, ಇಂತಹ ಪವಿತ್ರ ವ್ರತಗಳಲ್ಲಿ ಅತ್ಯಂತ ಶ್ರೇಷ್ಠವಾದ, ಶ್ರೇಯಸ್ಕರವಾದ, ಸಕಲರೂ ಸುಲಭದಲ್ಲಿ ಆಚರಿಸಲು ಯೋಗ್ಯವಾದ ವ್ರತ ಏಕಾದಶಿ ವ್ರತ.
ಕೃಷ್ಣಾಮೃತಮಹಾರ್ಣವದ ಪ್ರಕಾರ, ಸಕಲ ತೀರ್ಥಕ್ಷೇತ್ರಗಳಿಂದ, ಸಕಲ ಪುಣ್ಯಕ್ಷೇತ್ರಗಳಿಂದ ಲಭಿಸಿದ ಪುಣ್ಯ, ಏಕಾದಶಿಗೆ ಸಮನಾಗಲಾರದು.
ವಸಿಷ್ಠರ ಪ್ರಕಾರ, ಹನ್ನೊಂದು ಇಂದ್ರಿಯಗಳಿಂದ ಸಂಪಾದಿಸಿದ ಸಕಲಪಾಪಗಳನ್ನು ಹನ್ನೊಂದನೆಯ ತಿಥಿಯಾದ ಏಕಾದಶಿಯು ಪರಿಹರಿಸುತ್ತದೆ, ಆದ್ದರಿಂದ ಏಕಾದಶಿಗೆ ಸಮವಾದ ಪಾವನವಾದದ್ದು ಯಾವುದೂ ಇಲ್ಲ.
ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು.
ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ. ಅಲ್ಲದೇ ವೈಕುಂಠ ಏಕಾದಶಿಯ ಪವಿತ್ರ ದಿನ ಅಭ್ಯಂಜನ ಮಾಡಿ, ಶ್ರೀನಿವಾಸ ಉತ್ಸವ ಮೂರ್ತಿಯ ಜೋಕಾಲಿಗೆ ತಲೆ ತಾಕಿಸಿ, ವೈಕುಂಠದ್ವಾರದಿಂದ ಹೊರಬಂದರೆ ಮುಕ್ತಿ ಕಟ್ಟಿಟ್ಟ ಬುತ್ತಿ ಅನ್ನುವ ನಂಬಿಕೆಯೂ ಇದೆ..
ವೈಕುಂಠ ಏಕಾದಶಿ...!!!
ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ.
ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂದು ವೈಷ್ಣವ ಆಲಯಗಳಲ್ಲಿ ಉತ್ತರ ದ್ವಾರದ ಬಳಿ ಮುಂಜಾನೆ ಭಗವಂತನ ದರ್ಶನಕ್ಕಾಗಿ ಕಾದಿರುತ್ತಾರೆ.
ಈ ದಿನ ಮಹಾವಿಷ್ಣು ಗರುಡ ವಾಹನದ ಮೇಲೆ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದುಬಂದು ಭಕ್ತರಿಗೆ ದರ್ಶನ ನೀಡುತ್ತಾನೆ.
ಆದಕಾರಣ ಇದಕ್ಕೆ ಮುಕ್ಕೋಟಿ ಏಕಾದಶಿ ಎಂಬ ಹೆಸರು ಬಂದಿದೆ.
ಈ ಒಂದು ಏಕಾದಶಿ ಮೂರು ಕೋಟಿ ಏಕಾದಶಿಗಳಿಗೆ ಸಮವಾದ ಪವಿತ್ರತೆಯನ್ನು ಹೊಂದಿರುವ ಕಾರಣ ಇದನ್ನು ಮುಕ್ಕೋಟಿ ಏಕಾದಶಿ ಎನ್ನುತ್ತಾರೆ.
ಮುಕ್ಕೋಟಿ ಏಕಾದಶಿ ದಿನ ಹಾಲಾಹಲ, ಅಮೃತ ಎರಡೂ ಹುಟ್ಟಿದವು. ಈ ದಿನವೇ ಶಿವನು ಹಾಲಾಹಲ ನುಂಗಿದ. ಮಹಾಭಾರತ ಯುದ್ಧದಲ್ಲಿ ಭಗವದ್ಗೀತೆಯನ್ನು ಕೃಷ್ಣನು ಅರ್ಜುನನಿಗೆ ಇದೇ ದಿನ
ಉಪದೇಶಿಸಿದ ಎಂಬ ನಂಬಿಕೆ ಇದೆ.
ಈ ದಿನ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆಗಳು , ಹೋಮ, ಹವನ ಜಪ ,ತಪಗಳು ನಡೆಯುತ್ತವೆ .ಈ ದಿನ ಉಪವಾಸ ಹಾಗು ಜಾಗರಣೆ ಮಾಡಿದರೆ ಒಳ್ಳೆಯದಂತೆ .
ವಿಷ್ಣು ಪುರಾಣದ ಪ್ರಕಾರ ಇಬ್ಬರು ರಾಕ್ಷಸರು ತನಗೆ ವಿರೋದ ವಾಗಿದ್ದರೂ ವೈಕುಂಠ ಏಕಾದಶಿ ದಿನ ತನ್ನ ಬಾಗಿಲನ್ನು ತೆರೆದಿರುತ್ತಾನಂತೆ ಈ ಕತೆಯನ್ನು ಕೇಳಿದವರಿಗೆ ಮೋಕ್ಷ ಪ್ರಾಪ್ತಿಯಾಗುವಂತೆ ವೈಕುಂತದ ಬಾಗಿಲನ್ನು ತೆರೆದಿಡುವಂತೆ ಬೇಡಿಕೊಳ್ಳುತ್ತಾರೆ.
ಆದುದರಿಂದ ಎಲ್ಲಾ ವಿಷ್ಣು ದೇವಾಲಯದ ಬಾಗಿಲುಗಳನ್ನು ಆ ದಿನ ತೆಗೆದಿರುತ್ತಾರೆ . ಮಾಮೂಲಿ ದಿನಗಳಲ್ಲಿ ಉತ್ತರ ದ್ವಾರಗಳನ್ನು ಮುಚ್ಚಿರುತ್ತಾರೆ .
ಆದರೆ, ವೈಕುಂಠ ಏಕಾದಶಿದಿನ ಬಾಗಿಲನ್ನು ತೆರೆದಿರುತ್ತಾರೆ .
ವೈಕುಂಠ ಏಕಾದಶಿ ದಿನ ತಿರುಮಲೆಯ ದೇವಾಲಯದಲ್ಲಿರುವ ಉತ್ತರ ದ್ವಾರವನ್ನು ತೆರೆದಿರುತ್ತಾರೆ. ಪದ್ಮ ಪುರಾಣದ ಪ್ರಕಾರ ವಿಷ್ಣುವಿನಿಂದ ಬಂದ ಶಕ್ತಿಯಿಂದ ಮೊರಾ ಎಂಬ ರಾಕ್ಷಸನನ್ನು ಸಂಹರಿಸಿದ ದಿನವಂತೆ .
ಮುಕ್ಕೋಟಿ ಏಕಾದಶಿ ದಿನದಂದು ಅಂದರೆ ಧನುರ್ಮಾಸ ಶುಕ್ಲ ಏಕಾದಶಿ ದಿನದಂದು ಉಪಾಸವಿರ ಬೇಕಂತೆ ಇದಕ್ಕೆ ಕಾರಣವೇನೆಂದರೆ..
ಮೊರಾ ಎಂಬ ರಾಕ್ಷಸನು ಅಂದು ಅಕ್ಕಿಯಲ್ಲಿ ಅಡಗಿ ಕುಳಿತಿರುತ್ತಾನಂತೆ ಆದುದರಿಂದ ಅಂದು ಅಕ್ಕಿಯಿಂದ ಮಾಡಿದ ಯಾವುದೇ ಪದಾರ್ಥವನ್ನು ತಿನ್ನ ಬಾರದು .
ಮುಕ್ಕೋಟಿ ಏಕಾದಶಿ ಒಂದು ದಿನ ಉಪವಾಸ ವಿದ್ದರೆ ಮಿಕ್ಕ 23 ಏಕಾದಶಿಗಳಲ್ಲಿ ಉಪವಾಸ ವಿದ್ದಂತೆಯೇ ಎಂದು ವಿಷ್ಣು ಪುರಾಣದಲ್ಲಿ ಹೇಳಲಾಗಿದೆ.
🙏🙏🙏
ಸಂಗ್ರಹ
28/12/2025
ದೊಡ್ಡಬಳ್ಳಾಪುರದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಈ ದಿನದ ಅಲಂಕಾರ
25/12/2025
ಶ್ರೀ ಘಾಟಿ ಸುಬ್ರಮಣ್ಯ ಸ್ವಾಮಿ ಬ್ರಹ್ಮರಥೋತ್ಸವ ದ ಪ್ರಯುಕ್ತ ವಿಶೇಷ ಅಲಂಕಾರ