30/03/2026
KPS Magnet ಯೋಜನೆ ವಿರೋಧಿಸಿ ಗಣಿಭಾದಿತ ಸಂಡೂರು ತಾಲೂಕು ಮಟ್ಟದ ಸರ್ಕಾರಿ ಶಾಲೆಗಳನ್ನು ಉಳಿಸಲು ಆಗ್ರಹಿಸಿ ವಿದ್ಯಾರ್ಥಿಗಳ ಪೋಷಕರ ಪ್ರತಿಭಟನಾ ಸಮಾವೇಶ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನಡೆಯಿತು.
Official Profile of AIDSO Ballari district committee
All India Democratic Students'Organisation
Striving for Scientific-Secular-Democratic
Education!
30/03/2026
KPS Magnet ಯೋಜನೆ ವಿರೋಧಿಸಿ ಗಣಿಭಾದಿತ ಸಂಡೂರು ತಾಲೂಕು ಮಟ್ಟದ ಸರ್ಕಾರಿ ಶಾಲೆಗಳನ್ನು ಉಳಿಸಲು ಆಗ್ರಹಿಸಿ ವಿದ್ಯಾರ್ಥಿಗಳ ಪೋಷಕರ ಪ್ರತಿಭಟನಾ ಸಮಾವೇಶ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನಡೆಯಿತು.
27/02/2026
*ಸರ್ಕಾರಿ ಶಾಲೆಗಳನ್ನು ಕೊಲ್ಲುವ KPS Magnet ಯೋಜನೆ ವಿರೋಧಿಸಿ ಸಾರ್ವಜನಿಕ ಶಿಕ್ಷಣ ಉಳಿಸಿ ಬಳ್ಳಾರಿ ಜಿಲ್ಲಾ ಸಮಾವೇಶ..*
AIDSO ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಜನ ಸಮಿತಿ ಜಂಟಿಯಾಗಿ ಸಂಘಟಿಸಿದ ಈ ಸಮಾವೇಶದ ನಂತರ, ಬಲಿಷ್ಠ ಸಾರ್ವಜನಿಕ ಶಿಕ್ಷಣ ಉಳಿಸಿ ಜನ ಸಮಿತಿ ರಚಿಸಲಾಯಿತು! ಜಿಲ್ಲೆಯ ಹಿರಿಯರು ಸೇರಿದಂತೆ, ಹಲವು ಹಳ್ಳಿಗಳ ಪೋಷಕರು ಸಮಿತಿಯಲ್ಲಿದ್ದಾರೆ.
01/02/2026
ಕೆಪಿಎಸ್ ಮ್ಯಾಗ್ನೆಟ್ ಶಾಲೆ ಹೆಸರಿನಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಹೊಸ ಮಾದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಚ್ಚುವುದನ್ನು ವಿರೋಧಿಸಿ ವಿದ್ಯಾರ್ಥಿಗಳ ಪೋಷಕರ ಪ್ರತಿಭಟನೆ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ.
01/02/2026
ಸಂಡೂರು ತಾಲೂಕಿನ ದೌಲತ್ಪುರು ಗ್ರಾಮದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ವಿರೋಧಿಸಿ ಪೋಷಕರು ಮತ್ತೆ ವಿದ್ಯಾರ್ಥಿಗಳು ಸೇರಿ AIDSO ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
31/01/2026
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಳೆ ದರೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಚ್ಚುವುದನ್ನು ವಿರೋಧಿಸಿ ವಿದ್ಯಾರ್ಥಿಗಳ ಪೋಷಕರ ಪ್ರತಿಭಟನೆ ಈಶ್ವರ ಗುಡಿ ಹತ್ತಿರ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನಡೆಯಿತು.
30/01/2026
ಕೆಪಿಎಸ್ ಮ್ಯಾಗ್ನೆಟ್ ಶಾಲೆ ಹೆಸರಿನಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಹಳೆ ಮಾದಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಉರ್ದು ಶಾಲೆಗಳನ್ನು ಮುಚ್ಚವುದನ್ನು ವಿರೋಧಿಸಿ ಪೋತಪ್ಪ ಕಟ್ಟೆ ಹತ್ತಿರ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳ - ಪೋಷಕರ ಪ್ರತಿಭಟನೆ ನಡೆಸಲಾಯಿತು.
30/01/2026
KPS Magnet ಶಾಲೆ ಹೆಸರಿನಲ್ಲಿ ಬಳ್ಳಾರಿ ತಾಲೂಕಿನ ಹೊಸ ಯರಗುಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಚ್ಚುವುದನ್ನು ವಿರೋಧಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪೋಷಕರ ಪ್ರತಿಭಟನೆ ನಡೆಸಲಾಯಿತು.
09/01/2026
ಊರಿಗೊಂದು ಸರ್ಕಾರಿ ಶಾಲೆ ಇರಬೇಕು - ನಮ್ಮೂರ ಸರ್ಕಾರಿ ಉಳಿಸಿ!-ಬಳ್ಳಾರಿ ಜಿಲ್ಲಾಮಟ್ಟದ ಪ್ರತಿಭಟನಾ ಸಮಾವೇಶದಲ್ಲಿ ಪೋಷಕರ ಘೋಷಣೆ.
KPS-Magnet ಯೋಜನೆ ವಿರೋಧಿಸಿ ಬಳ್ಳಾರಿಯಲ್ಲಿ AIDSO ವಿದ್ಯಾರ್ಥಿ ಸಂಘಟನೆಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆಯ ಮೂಲಕ ಗಾಂಧಿ ಭವನವನ್ನು ತಲುಪುವ ಮೂಲಕ ಸಮಾವೇಶದಲ್ಲಿ ನೆರೆದಿದ್ದ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನಾಯಕರು, ನಾಗರಿಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಮಾವೇಶದ ಮುಖ್ಯ ಭಾಷಣಕಾರರಾಗಿ AIDSO ರಾಜ್ಯ ಖಜಾಂಚಿಗಳಾದ ಸುಭಾಷ್ ಬೆಟ್ಟದ ಕೊಪ್ಪರವರು ಮಾತನಾಡಿ, "ಕೆಪಿಎಸ್ ಮ್ಯಾಗ್ನೆಟ್ ಯೋಜನೆಯು 40,000 ಸರ್ಕಾರಿ ಶಾಲೆಗಳನ್ನು ಕೊಲ್ಲುತ್ತದೆ, ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಈ ಹಿನ್ನಲೆಯಲ್ಲಿ ಈ ಯೋಜನೆಯನ್ನು ಕೂಡಲೇ ಸರ್ಕಾರ ಕೈಬಿಡಬೇಕೆಂದು ಅಗ್ರಹಿಸಿದರು. KPS Magnet ಶಾಲೆಯ ನಿರ್ವಹಣೆಯನ್ನು ಮತ್ತು ಸಂಪೂರ್ಣ ಹಣಕಾಸಿನ ವ್ಯವಸ್ಥೆಯನ್ನು ಆ ಶಾಲೆಯು ಮಾಡಿಕೊಳ್ಳು ತಕ್ಕದ್ದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರಿಗೆ ವ್ಯವಸ್ಥೆಯನ್ನು ಪೋಷಕರೆ ನೋಡಿಕೊಳ್ಳಬೇಕೆಂದು ಹೇಳಲಾಗಿದೆ. ಗುಜರಾತಿನಲ್ಲಿ ಶಾಲೆಗಳ ವಿಲೀನದ ಹೆಸರಿನಲ್ಲಿ ಬಹುತೇಕ ಶಾಲೆಗಳ ವಿಲೀನ ಮಾಡಿದ ಮೇಲೆ 2,50,000 ಬಡಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಹೋಗುವ ಮಕ್ಕಳಿಗೆ 6ನೇ ತರಗತಿಯಿಂದಲೇ ಮಣ್ಣಿನ ಹಣತೆ ಮಾಡುವ, ಅಡಿಕೆ ಸುಲಿಯುವ ಕೌಶಲ್ಯಗಳನ್ನು ಕಲಿಸುವುದಾಗಿ ಶಿಕ್ಷಣ ಮಂತ್ರಿಗಳು ಬಹಿರಂಗಪಡಿಸಿದ್ದಾರೆ. ಕಾರ್ಮಿಕರ, ರೈತರ ಮಕ್ಕಳನ್ನು ಶಿಕ್ಷಣದಿಂದ ವಂಚಿತರಾಗಿಸುವುದೇ ಸರ್ಕಾರದ ಹುನ್ನಾರವಾಗಿದೆ. ಆದ್ದರಿಂದ ನಮ್ಮೂರಿನ ಶಾಲೆಯನ್ನು ಉಳಿಸಲು ನಾವೇ ಮುಂದಾಗಬೇಕು, ಪ್ರತಿಯೊಂದು ಹಳ್ಳಿಯಲ್ಲಿಯೂ ಪ್ರತಿರೋಧ ಚಳುವಳಿಯನ್ನು ಬೆಳೆಸಬೇಕೆಂದು ಕರೆ ನೀಡಿದರು."
ಕರ್ನಾಟಕ ಮೆಡಿಕಲ್ ಅಸೋಸಿಯೇಷನ್ ಮಾಜಿ ರಾಜ್ಯ ಕಾರ್ಯದರ್ಶಿಗಳು ಬಳ್ಳಾರಿಯ ಖ್ಯಾತ ಯುರೋಲಾಜಿಸ್ಟ್ ಡಾ.ಗೋವರ್ಧನ್ ರೆಡ್ಡಿ ಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ''ಪ್ರತಿಯೊಂದು ಹಳ್ಳಿಯಲ್ಲಿ ಸರ್ಕಾರಿ ಶಾಲೆ ಇರಬೇಕು, ಅಲ್ಲದೆ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು ಸಾಕಷ್ಟು ಸಮಸ್ಯೆಗಳಿವೆ. ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಈ ಸಮಸ್ಯೆಗಳನ್ನು ಸರಿಪಡಿಸುವ ಬದಲಾಗಿ ಪರ್ಯಾಯ ವ್ಯವಸ್ಥೆಯೇ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಎಂದು ಸರ್ಕಾರ ಹೇಳುತ್ತಿದೆ. ಇದು ಸರ್ಕಾರ ಶಿಕ್ಷಣ ನೀಡುವ ತನ್ನ ಜವಾಬ್ದಾರಿಯಿಂದ ನುಣಿಚಿಕೊಳ್ಳುತ್ತಿರುವ ಕ್ರಮವಾಗಿದೆ. ಈಗಾಗಲೇ ಆಯುಷ್ಮಾನ್ ಭಾರತ್, ಯಶಸ್ವಿನಿ ಸ್ಕೀಮ್ ನಂತಹ ಸರ್ಕಾರಿ ಯೋಜನೆಗಳಿಂದಾಗಿ ಆರೋಗ್ಯ ಕ್ಷೇತ್ರವು ಖಾಸಗಿಕರಣವಾಗಿ, ಇಡೀ ಆರೋಗ್ಯ ವ್ಯವಸ್ಥೆಯೇ ಕುಸಿದಿದೆ. ಅದೇ ರೀತಿ ಈ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಜಾರಿಯಾಗಿ ಶಿಕ್ಷಣ ಕ್ಷೇತ್ರ ಖಾಸಗಿಕರಣವಾದಲ್ಲಿ ಬಡ ರೈತ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದು ತಿಳಿಸಿದರು."
ಸಮಾವೇಶದಲ್ಲಿ ಭಾಷಣಕಾರರಾಗಿ ಎಐಡಿಎಸ್ಓ ರಾಜ್ಯ ಉಪಾಧ್ಯಕ್ಷರಾದ ಅಪೂರ್ವ ಸಿಎಂ ರವರು ಮಾತನಾಡುತ್ತಾ, ''ಸರ್ಕಾರದ ಅಂಕಿ ಅಂಶಗಳೇ ಹೇಳುವ ಪ್ರಕಾರ ನಮ್ಮ ರಾಜ್ಯದಲ್ಲಿ 60 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. 21,000 ಸರ್ಕಾರಿ ಶಾಲಾ ಕಟ್ಟಡಗಳು ಬೀಳುವ ಸ್ಥಿತಿಯಲ್ಲಿವೆ. 7,500 ಏಕೋಪದ್ಯಾಯ ಶಾಲೆಗಳಿವೆ. 3,500 ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಗೂ ಸಹ ಶೌಚಾಲಯಗಳಿಲ್ಲ. ಈ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯು ಈ ಸಮಸ್ಯೆಗಳ ಪರಿಹಾರದ ಕುರಿತು ಎಲ್ಲೂ ಮಾತನಾಡುವುದಿಲ್ಲ. ಸಾರ್ವಜನಿಕ ಶಿಕ್ಷಣವನ್ನು ನಾಶಗೊಳಿಸುವ ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತೆಗೆದುಕೊಂಡು ಹೋಗಲು ಮುಂದಾಗಿರುವ ರಾಜ್ಯ ಸರ್ಕಾರದ ನೀತಿಯನ್ನು ಬಲಿಷ್ಠವಾಗಿ ಕಟ್ಟಬೇಕೆಂದು ಆಗ್ರಹಿಸಿದರು."
ಸಮಾವೇಶದಲ್ಲಿ ಮುಖ್ಯ ಅತಿಥಿ ನಿವೃತ್ತ ಇಂಗ್ಲಿಷ್ ಶಿಕ್ಷಕರಾದ, ಉಪ್ಪಾರ್ ನರಸಣ್ಣ ಅವರು ಮಾತನಾಡಿ "ಇತಿಹಾಸದುದ್ದಕ್ಕೂ ಸಾವಿತ್ರಿಬಾಯಿ ಫುಲೆ, ಮಹಾತ್ಮ ಜ್ಯೋತಿರಾವ್ ಫುಲೆ, ಈಶ್ವರ ಚಂದ್ರ ವಿದ್ಯಾಸಾಗರ್ ರಂತಹ ಮಹನೀಯರು ಶಿಕ್ಷಣವು ಸಾರ್ವತ್ರಿಕವಾಗಬೇಕು ಎಂದು ಹೋರಾಡಿದರು. ಅವರ ನೈಜ ಉತ್ತರಾಧಿಕಾರಿಗಳಾದ ನಾವು ಆ ಹೋರಾಟವನ್ನು ಮುಂದುವರಿಸುವ ಸಮಯ ಬಂದಿದೆ." ಎಂದರು.
ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ನಾಯಕರಾದ ಕೆ ಸೋಮಶೇಖರ್ ಗೌಡ ಅವರು ಮಾತನಾಡಿ "ಸರ್ಕಾರಿ ಶಾಲೆಗಳನ್ನು ಮುಚ್ಚುವ ನೀತಿಯನ್ನು ಈ ಹಿಂದೆ ಬಿಜೆಪಿ ಸರ್ಕಾರವು ಪ್ರಯತ್ನಿಸಿತ್ತು. ಇದನ್ನು ವಿರೋಧಿಸುತ್ತಲೇ ಅಧಿಕಾರಕ್ಕೆ ಬಂದ ಪ್ರಸ್ತುತ ಕಾಂಗ್ರೆಸ್ ಸರ್ಕಾರವು ಮತ್ತೆ ಈ ನೀತಿಯನ್ನು ಇನ್ನಷ್ಟು ಕರಾಳ ಮಾದರಿಯಲ್ಲಿ ಜಾರಿಗೊಳಿಸುತ್ತಿದೆ. ಈ ವಿಷಯದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಸಹ ಶಾಮೀಲು ಆಗಿದ್ದಾರೆ" ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಸಮಾವೇಶದ ಅಧ್ಯಕ್ಷತೆಯನ್ನು ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಕಾರ್ಯದರ್ಶಿ, ಕಂಬಳಿ ಮಂಜುನಾಥ ವಹಿಸಿದ್ದರು. ಪ್ರಾಸ್ತಾವಿಕವಾಗಿ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಕೆ.ಈರಣ್ಣ ಮಾತನಾಡಿದರು.
ಬಳ್ಳಾರಿ ಸರ್ಕಾರಿ ಶಾಲೆಗಳ ಸಾರ್ವಜನಿಕ ಶಿಕ್ಷಣ ಉಳಿಸಿ ಪೋಷಕರ ಸಮಿತಿಯ ನಾಯಕರಾದ, ಸುಂಕಪ್ಪ, ಬಸವರಾಜ್, ನಾಗರಾಜ, ಪಾರ್ವತಿ, ಹನುಮಂತಮ್ಮ, ಕುಮಾರಪ್ಪ, ಗಾದಲಿಂಗ, ಚಂದ್ರಶೇಖರ್, ನೀಲಮ್ಮ, ರಾಮು, ಗಾಳೆಪ್ಪ, ಖಂಡೆಪ್ಪ, ನಾಗಮ್ಮ, ರುದ್ರಮ್ಮ, ವಸಂತ್, ಒಳಗೊಂಡಂತೆ ಬಿಸಲಹಳ್ಳಿ, ಬೇವಿನಹಳ್ಳಿ, ಕಕ್ಕಬೇವಿನಹಳ್ಳಿ, ಅಮರಾಪುರ, ತೆಗ್ಗಿನಬೂದಿಹಾಳ್, ಅಸುಂಡಿ, ಎತ್ತಿನಬೂದಿಹಾಳ್, ಯಾಳ್ಪಿ, ಬಿ.ಗೋನಾಳ್, ಕೊರ್ಲಗುಂದಿ, ಗುಡಾರ್ ನಗರ, ಹಾಗಲೂರು, ಬಿ.ಗೋನಾಳು ಸೇರಿದಂತೆ ವಿವಿಧ ಹಳ್ಳಿಗಳಿಂದ ಪಾಲಕರು ಹಾಗೂ ನಾಗರಿಕರು, ಯುವಕರು ಸೇರಿ ರಾಜ್ಯ ಸರ್ಕಾರದ ಶಿಕ್ಷಣ-ವಿರೋಧಿ ನೀತಿಯನ್ನು ವಿರೋಧಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಸರ್ಕಾರವು ಯೋಜನೆಯನ್ನು ಹಿಂಪಡೆದು ಅಧಿಕೃತವಾಗಿ ಆದೇಶ ಹೊರಡಿಸುವವರೆಗೂ ಈ ಹೋರಾಟ ಮುಂದುವರೆಯುತ್ತದೆ ಹಾಗೂ ಜಿಲ್ಲೆಯ ಮೂಲೆ ಮೂಲೆಗೂ ಪ್ರತಿರೋಧ ಚಳುವಳಿಯಾಗಿ ಹಬ್ಬುತ್ತದೆ ಎಂದು ಸಮಾವೇಶದಲ್ಲಿ ಸಂಕಲ್ಪವನ್ನು ತೆಗೆದುಕೊಳ್ಳಲಾಯಿತು.
07/01/2026
ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಧಿಕ್ಕಾರ!
ನಮ್ಮೂರ ಸರ್ಕಾರಿ ಶಾಲೆ ಉಳಿಸಿ!!
ಬಳ್ಳಾರಿ ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ಉಳಿಸಲು ಜಿಲ್ಲಾ ಮಟ್ಟದ ಪ್ರತಿಭಟನಾ ಸಮಾವೇಶ !!!
ಜನವರಿ 9ರಂದು , ಬೆಳಿಗ್ಗೆ 11ಗಂಟೆಗೆ
ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಸಮಿತಿ
01/01/2026
ಬಳ್ಳಾರಿಯ ಕಚೇರಿಯಲ್ಲಿ AIDSO 72ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು!
ಮರ್ಯಾದೆ ಹತ್ಯೆಗಳು ಕೊನೆಯಾಗಲಿ!
ರಾಜ್ಯದಾದ್ಯಂತ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ KPS - ಮ್ಯಾಗ್ನೆಟ್ ಯೋಜನೆಯ ವಿರುದ್ಧದ ಹೋರಾಟದ ಕರೆಯೊಂದಿಗೆ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು!